Muddebihal: eviction of poor shed, demand for money from PDO for GPS- allegation

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಗ್ರಾಪಂ ಪಿಡಿಒ ವಿಜಯಾ ಮುದಗಲ್ ಹಾಗೂ ಕಾರ್ಯದರ್ಶಿ ವಿಲಾಸ ಚವ್ಹಾಣ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಮನೆಗಳ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಯರಝರಿ ಪಂಚಾಯಿತಿ ವ್ಯಾಪ್ತಿಯ ಹಂಡರಗಲ್ ಗ್ರಾಮಸ್ಥರು ತಾಪಂ ಇಒಗೆ ಸೋಮವಾರ ದೂರು ಸಲ್ಲಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಇಲ್ಲಿನ ತಾಲ್ಲೂಕಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಂಡರಗಲ್ಲ ಗ್ರಾಮದ ಹುಲ್ಲಪ್ಪ ಕೇಸಾಪೂರ ಮಾತನಾಡಿ, ಯರಝರಿ ಗ್ರಾಪಂನ ವ್ಯಾಪ್ತಿಯಲ್ಲಿ ಹಂಡರಗಲ್ಲ ಗ್ರಾಮದಲ್ಲಿ ಸೆ.6 ರಂದು ಪೊಲೀಸರ ಬಲದೊಂದಿಗೆ ಪಿಡಿಒ, ಕಾರ್ಯದರ್ಶಿಗಳು ಬಂದು ನಮ್ಮ ಮನೆಯ ಪಕ್ಕದಲ್ಲಿ ಬುದ್ಧಿಮಾಂದ್ಯಳು, ವಿಕಲಚೇತನಳು ಇರುವ ಮರಗಮ್ಮ ಕೇಸಾಪುರ ಹಾಕಿಕೊಂಡು ಉಪಜೀವನ ನಡೆಸುತ್ತಿದ್ದ ಶೆಡ್‌ನ್ನು ತೆರವುಗೊಳಿಸಿದ್ದಾರೆ. ಗಾಂವಠಾಣ ಜಾಗೆ ಎಂದು ಅದನ್ನು ಪಿಡಿಒ, ಕಾರ್ಯದರ್ಶಿಗಳು ತೆರವುಗೊಳಿಸಿದ್ದಾರೆ.

ಗ್ರಾಮದಲ್ಲಿ ಇನ್ನೂ ಹಲವಾರು ಕಡೆ ಗಾಂವಠಾಣಾ ಜಾಗೆ ಇದ್ದರೂ ನಮ್ಮ ಮಗಳಿದ್ದ ಶೆಡ್ ತೆರವುಗೊಳಿಸಿ ಅನ್ಯಾಯ ಮಾಡಿದ್ದಾರೆ ಎಂದು ತಾಪಂ ಇಒಗೆ ದೂರಿದರು.

ಇದಕ್ಕೆ ಉತ್ತರಿಸಿದ ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ, ಸದರಿ ಜಾಗೆ ಗ್ರಾಮ ಪಂಚಾಯಿತಿಗೆ ಸೇರಿದ ಗಾಂವಠಾಣೆ ಜಾಗೆ ಆಗಿದ್ದು ಅಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಜಾಗೆ ಗುರುತಿಸಲಾಗಿದೆ.ಹೀಗಾಗಿ ಅಲ್ಲಿನ ಅತಿಕ್ರಮಣ ತೆರವುಗೊಳಿಸಲಾಗಿದೆ. ಸರಕಾರದ ಜಾಗೆಯನ್ನು ಯಾರೊಬ್ಬರೂ ಅತಿಕ್ರಮಣ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ, ಗ್ರಾಪಂ ಜಾಗೆ ಅತಿಕ್ರಮಿಸಲು ಅವಕಾಶ ಇಲ್ಲ.ಆದರೂ ಹಂಡರಗಲ್ಲ ಗ್ರಾಮದಲ್ಲಿನ ಗಾಂವಠಾಣೆ ಜಾಗೆ ಎಷ್ಟಿದೆ ಎಂಬುದನ್ನು ಪರಿಶೀಲನೆ ನಡೆಸಿ ಸದರಿ ವಿವಾದದ ಕುರಿತು ವರದಿ ನೀಡಲು ತಾಪಂ ವ್ಯವಸ್ಥಾಪಕರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಪಿಡಿಒ ಅವರಿಂದ ಹಣಕ್ಕೆ ಬೇಡಿಕೆ ಆರೋಪ

ಗ್ರಾಮ ಪಂಚಾಯಿತಿ ಪಿಡಿಒ ವಿಜಯಾ ಮುದಗಲ್ ಜಿಪಿಎಸ್ ಮಾಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈಗಾಗಲೇ ಮನೆಗಳ ಜಿಪಿಎಸ್ ಮಾಡಲು 8 ಸಾವಿರ ರೂಪಾಯಿ ಹಣ ಕೊಟ್ಟಿದ್ದೇನೆ ಎಂದು ಗ್ರಾಮದ ದಾವಲಸಾಬ ಗುಡೂರ ಆರೋಪಿಸಿದರು.

ಸನ್ 2021ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ನನ್ನ ಪತ್ನಿಯ ಹೆಸರಿನಲ್ಲಿ ಮನೆ ಮಂಜೂರಾಗಿದ್ದು ಮೂರನೇ ಹಂತಕ್ಕೆ ಮನೆ ಬಂದು ನಿಂತಿದೆ.ಜಿಪಿಎಸ್ ಮಾಡಿಸಲು ಹಣವನ್ನು ಕೊಟ್ಟಿದ್ದೇನೆ. ಆದರೆ ಜಿಪಿಎಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಇಬ್ರಾಹಿಂ ಮಾಗಿ ಮಾತನಾಡಿ, ಯರಝರಿ ಗ್ರಾಪಂ ಕಾರ್ಯದರ್ಶಿ ವಿಲಾಸ ಚವ್ಹಾಣ ಗ್ರಾಮೀಣ ಭಾಗದ ಸಮಸ್ಯೆಗಳನ್ನು ತೆಗೆದುಕೊಂಡು ಹೋದರೆ ಜನರೊಂದಿಗೆ ಉಡಾಫೆಯೊಂದಿಗೆ ಮಾತನಾಡುತ್ತಾರೆ. ಅಲ್ಲದೇ ತಮ್ಮದೇ ಒಂದು ಗುಂಪು ಕಟ್ಟಿಕೊಂಡಿದ್ದು ಧ್ವನಿ ಎತ್ತುವವರ ಮೇಲೆ ಹೊಡೆಸುವ ಬೆದರಿಕೆ ಹಾಕುತ್ತಾರೆ. ಸೌಜನ್ಯದಿಂದ ವರ್ತಿಸುವುದೇ ಇಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಜಿಪಿಎಸ್‌ಗೆ ಪಿಡಿಒ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಆರೋಪ ಬಂದಾಗ ತಾಪಂ ಇಒ ಎದುರಿನಲ್ಲೇ ದೂರುದಾರರನ್ನು ಬೆದರಿಸುವ ಧಾಟಿಯಲ್ಲಿ ಕಾರ್ಯದರ್ಶಿ ವಿಲಾಸ ಚವ್ಹಾಣ ಅವರು ನಡೆದುಕೊಂಡಿದ್ದು ಕಂಡು ಬಂದಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ