Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ