Salumada Thimmakka National Greenery Award won by Kuvara of Ededore.

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ಎಡೆದೊರೆ ನಾಡಿನ ಕುವರನಿಗೆ ಒಲಿದು ಬಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್

ರಾಯಚೂರು: ದುರ್ಗದ ಸಿರಿ ದಶರಥ ಸಾವೂರ್‌ಗೆ ರಾಷ್ಟ್ರೀಯ ಗ್ರೀನರಿ ಅವಾರ್ಡ್ ಹಳ್ಳಿಯಿಂದ ಬಂದು ಟಿವಿ-5 ಅಸೋಸಿಯೆಟ್ ಎಡಿಟರ್ ಆದ ಸಾಧಕನಿಗೆ ಪುರಸ್ಕಾರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ದೇವದುರ್ಗದ ಪ್ರತಿಭೆ ದಶರಥ ಸಾವೂರ್‌ಗೆ ರಾಷ್ಟ್ರ ಮಟ್ಟದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ರಾಜ್ಯದ ವಿವಿಧ ವಿಭಾಗದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಗ್ರೀನರಿ ಅವಾರ್ಡ್ ನೀಡಲಾಗುತ್ತಿದೆ. ಪ್ರತಿಷ್ಠಿತ ಪ್ರಶಸ್ತಿ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಒಲಿದು ಬಂದಿದ್ದು ಸಾಧಕನ ಸಾಧನೆಗೆ ಕನ್ನಡಿ ಹಿಡಿದಂತಾಗಿದೆ.

ದೇವದುರ್ಗ ತಾಲೂಕಿನ ಪುಟ್ಟ ಗ್ರಾಮ ಯರಮಸಾಳದಲ್ಲಿ ಬೆಳೆದ ದಶರಥ ಸಾವೂರ್ ಹಳ್ಳಿಯಲ್ಲಿ ಕಲಿತು ಇಂದು ಪ್ರತಿಷ್ಠಿತ ಟಿವಿ-5 ಚಾನೆಲ್‌ನ ಅಸೋಸಿಯೆಟ್ ಎಡಿಟರ್ ఆగి ಕಾರ್ಯನಿರ್ವಹಿಸುತ್ತಿದ್ದಾರೆ.

‘ದಶರಥ ಸಾವೂರ್’ 2010 ರಲ್ಲಿ ಸಮಯ ಟಿವಿ ಮೂಲಕ ಮಾಧ್ಯಮ ರಂಗಕ್ಕೆ ಧುಮುಕಿದ್ದರು. ಅಂದಿನಿಂದ ಹಿಂದುರುಗಿಯೇ ನೋಡಿಲಿಲ್ಲಾ.

ಸಮಯ ಟಿವಿ ರಾಯಚೂರು ವರದಿಗಾರನಾಗಿ ನಂತರ ಜಿಲ್ಲಾ ಬಾಗಲಕೋಟೆ ಹಾಗೂ ಹಾಸನ ಜಿಲ್ಲೆಯ ಟಿವಿ-9 ಜಿಲ್ಲಾ ವರದಿಗಾರ ರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ನಂತರ ರಾಜ್ಯದ ನಂಬರ್ 1 ವಿಜಯವಾಣಿಯ ಪತ್ರಿಕೆ ರಾಜಕೀಯ ವಿಶ್ಲೇಷಕರಾಗಿ ನ್ಯೂಜ್ 18 ಚಾನೆಲ್ ವರದಿಗಾರರಾಗಿ, ಬಳಿಕ ಟಿವಿ 5 ನಿರೂಪಕರಾಗಿ ಸದ್ಯ ಟಿವಿ-5 ಅಸೋಸಿಯೆಟ್ ಎಡಿಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ. ಮಾಧ್ಯಮ ರಂಗದಲ್ಲಿ ಸುಮಾರು ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ 14 ವರ್ಷಗಳಿಂದ ಸಾಧನೆಯ ಹಾದಿ 2010 ರಲ್ಲಿ ಸಮಯ ಟಿವಿಯಲ್ಲಿ ಇನ್ಸುಟ್‌ನಲ್ಲಿ ಕಾರ್ಯಾರಂಭ, ಸಮಯ ಟಿವಿಯ ರಾಯಚೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿ, ಅಲ್ಲಿಂದ ಹೈದರಾಬಾದನ ವರದಿಗಾರನಾಗಿ ಮುಂದುವರಿಕೆ.

2012 ರಲ್ಲಿ ಟಿವಿ9 ಹುಬ್ಬಳ್ಳಿ ವರದಿಗಾರರಾಗಿ, ನಂತರದಲ್ಲಿ ಬಾಗಲಕೋಟೆ ಜಿಲ್ಲೆಯ ಟಿವಿ9 ವರದಿಗಾರರಾಗಿ ಸೇವೆ. 2014 ರಲ್ಲಿ ಹಾಸನ ಜಿಲ್ಲೆಯ ಟಿವಿ9 ವರದಿಗಾರರಾಗಿ ಪ್ರಖ್ಯಾತಿ ಪಡೆದಿದ್ದಾರೆ. ಹಾಸನದಲ್ಲಿ ವರದಿಗಾರರಾಗಿದ್ದ ವೇಳೆ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದು ಇವರ ವರದಿಗಾರಿಕೆ.

ಅರಸೀಕೆರೆ ತಾಲೂಕು ಕಾವಲುಗಾರರ ಗೊಲ್ಲರ ಹಟ್ಟಿಗಳು, ಮೌಡ್ಯ ಆಚರಣೆ
ಮಾಡುತ್ತಿದ್ದ ಬಗ್ಗೆ ಟಿವಿ9 ವಾಹಿನಿಯಲ್ಲಿ “ಹೆಣ್ಣಾಗಿದ್ದೇ ತಪ್ಪಾ” ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಸರ್ಕಾರದ ಕಣ್ಣು ತೆರೆಸಿದ್ದು ಮಾತ್ರವಲ್ಲ ಮೌಡ್ಯಗಳಿಂದ ಇದ್ದ ಗೊಲ್ಲರಹಟ್ಟಿಗಳಲ್ಲಿ ಜಾಗೃತಿ ಮೂಡಿಸಿ 43 ಗೊಲ್ಲರಹಟ್ಟಿಗಳನ್ನು ಬದಲಿಸಿದ ಮಹತ್ಕಾರ್ಯ ಮಾಡಿದ್ದಾರೆ.

ನಂತರ, ಟಿವಿ ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ರಾಜಕೀಯದ ಒಳ ಹೊರಗೂ ವಿಶ್ಲೇಷಣೆಯ ವರದಿ ಮಾಡಿದ ಕೀರ್ತಿ ಇವರದ್ದು. ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ಟಿವಿ ವಾಹಿನಿಯಲ್ಲಿ ನ್ಯೂಸ್ ಆ್ಯಂಕರ್ ಆಗಿ ‘ಆರ್ ವಿ ಸ್ಪೂಪಿಡ್?’ ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ಹತ್ತು ಹಲವು ರಾಜ್ಯ ಮಟ್ಟದ ಪ್ರಶಸ್ತಿಗಳು ಒಲಿದು ಬಂದಿವೆ.

2023ರಲ್ಲಿ ದಾವಣಗೇರಾ ದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಆಯೋಜಿಸಿದ್ದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ
ಮಟ್ಟದ ಪ್ರಶಸ್ತಿ ಮುಡುಗೇರಿತ್ತು.

ಇದನ್ನೂ ಓದಿ: Muddebihal: ಬಡವರ ಶೆಡ್ ತೆರವು, ಜಿಪಿಎಸ್‌ಗೆ ಪಿಡಿಒಯಿಂದ ಹಣಕ್ಕೆ ಬೇಡಿಕೆ- ಆರೋಪ

ಮಾಧ್ಯಮ ರಂಗದ ಗುರುತರ ಸೇವೆ ಗುರುತಿಸಿ ಈಗ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಒಲಿದು ಬಂದಿದ್ದು ರಾಯಚೂರು ಜಿಲ್ಲೆಗೆ ಮತ್ತಷ್ಟು ಹಿರಿಮೆ ಹೆಚ್ಚಿದಂತಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ