'Governors should give the answer, not their balangochis'-BJP leader's rant at press conference

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಮುದ್ದೇಬಿಹಾಳ : ‘ಸೈಟ್ ಅಕ್ರಮ ಖರೀದಿಯ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಶಾಸಕ ನಾಡಗೌಡರೇ ಉತ್ತರ ಕೊಡಬೇಕೆ ಹೊರತು ಅವರ ಬಾಲಂಗೋಚಿಗಳಲ್ಲ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹಾಗೂ ಬಿಜೆಪಿ ಮುಖಂಡ ಹರೀಶ ನಾಟೀಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಾಲಿ ಶಾಸಕರು ತಂದಿರುವ ಅನುದಾನ ಎಷ್ಟು ಎಂಬುದನ್ನು ಆಧಾರ ಸಮೇತ ಕಾಂಗ್ರೆಸ್ಸಿಗರು ಮಾಧ್ಯಮವರಿಗೆ ವಿವರಿಸಬೇಕು. ಅದು ಬಿಟ್ಟು ಕೂಗಾಡುವುದು ಸುದ್ದಿಗೋಷ್ಠಿಯಲ್ಲ. ಅಷ್ಟಕ್ಕೂ ಆರೋಪ ಮಾಡಿದವರಿಗೆ ಆರೋಪ ಯಾರು ಹೊತ್ತಿದ್ದಾರೆಯೋ ಅವರು ಉತ್ತರ ಕೊಡಬೇಕಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಮುಖಂಡರು, ದಾಖಲೆಗಳಿಲ್ಲದೇ ವಿನಾಕಾರಣ ಶಾಸಕರನ್ನು ಸಮರ್ಥನೆ ಮಾಡಿಕೊಳ್ಳಬೇಕು ಎಂಬ ಉದ್ದೇಶವೊಂದೇ ಇದೆ ಎಂದರು.

ಜನಪ್ರತಿನಿಧಿಯಾದವರಿಗೆ ಒಳ್ಳೆಯತನದ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಚಿಂತನೆಯೂ ಬೇಕು. ಇಪ್ಪತೈದು ವರ್ಷಗಳಿಂದ ಆಗಿರುವ ಅಭಿವೃದ್ಧಿಯನ್ನು ಕ್ಷೇತ್ರದ ಜನತೆ ಗಮನಿಸಿದ್ದಾರೆ, ನಡಹಳ್ಳಿಯವರ ಅವಧಿಯಲ್ಲಾದ ಅಭಿವೃದ್ಧಿಯನ್ನೂ ನೋಡಿದ್ದಾರೆ. ಎಲ್ಲೊ ಒಂದು ಕಡೆ ಸಿಸಿ ರಸ್ತೆ ಬಿರುಕು ಬಿಟ್ಟಿದ್ದನ್ನೇ ಎತ್ತಿ ತೋರಿಸುವ ಕಾಂಗ್ರೆಸ್ ಮುಖಂಡರಿಗೆ ಹಳೇ ಸರಕಾರಿ ರಸ್ತೆಯಲ್ಲಿರುವ ಶೃಂಗಾರಗೌಡ ಪಾಟೀಲರ ಮನೆ ಮುಂದೆ ರಸ್ತೆ ಕಳಪೆಮಟ್ಟದ್ದಾಗಿದ್ದು ಕಂಡಿಲ್ಲವೇ ? ಏಪಿಎಂಸಿಯಲ್ಲಿ ಯಾವ ರೀತಿ ಕೆಲಸ ಮಾಡಲಾಗುತ್ತಿದೆ. ಯಾರು ಗುತ್ತಿಗೆದಾರರು ಇದ್ದಾರೆ ಎಂಬುದನ್ನು ಸ್ವಲ್ಪ ಬಿಡಿಸಿ ಹೇಳಬೇಕಿತ್ತು ಎಂದು ತಿಳಿಸಿದರು.

ಕವಡಿಮಟ್ಟಿ ಗ್ರಾಮಕ್ಕೆ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆಗೆ ಸಿಎಂ ಬಂದಾಗ ಸೌಜನ್ಯಕ್ಕೂ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿಸಲಿಲ್ಲ. ನಾಲತವಾಡ, ಮುದ್ದೇಬಿಹಾಳದಲ್ಲಿ ನಿರ್ಮಿಸಿರುವ ವೃತ್ತದಲ್ಲಿರುವ ಪುತ್ಥಳಿಗಳ ನಿರ್ಮಾಣದ ಕಾಮಗಾರಿಗೆ ಬಿಲ್ ಕೊಡದೇ ವಿಳಂಬ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದೀರಿ ಎಂದು ದೂರಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ಮಾಜಿ ಶಾಸಕ ನಡಹಳ್ಳಿಯವರು ಕೈಗೊಂಡಿರುವ ಅಭಿವೃದ್ಧಿ ಬಗ್ಗೆ ನಾವು ಹೇಳುವುದಕ್ಕೆ ಇಲ್ಲಿ ಕೂತಿಲ್ಲ.ಹಾಲಿ ಶಾಸಕರು ಎಷ್ಟು ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕು ಎಂದರು.

ಸೈಟ್ ಬಗ್ಗೆ ಬಂದಿರುವ ಆರೋಪದ ಬಗ್ಗೆ ಜನತೆಗೆ ಉತ್ತರ ನೀಡಬೇಕು. ಅದು ಬಿಟ್ಟು ಅವರ ಹಿಂಬಾಲಕರನ್ನು ಮುಂದೆ ಮಾಡಿರುವುದು ಸೋಜಿಗದ ಸಂಗತಿ.ಅವರ ನಾಯಕರ ಪರ ಆ ಪಕ್ಷದ ಮುಖಂಡರು ಮಾತನಾಡಿದರೆ ನಮ್ಮ ಪಕ್ಷದ ನಾಯಕರ ಪರವಾಗಿ ನಾವು ಮಾತನಾಡಬೇಕಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಲಕ್ಷ್ಮಣ ಬಿಜ್ಜೂರ, ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ ಮಾತನಾಡಿದರು.

ಇದನ್ನೂ ಓದಿ: Protest: ಯಡಹಳ್ಳಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಪ್ರತಿಭಟನೆ

ಮುಖಂಡರಾದ ಸೋಮನಗೌಡ ಬಿರಾದಾರ, ಸಂಜು ಬಾಗೇವಾಡಿ, ಶಂಕರಗೌಡ ಶಿವಣಗಿ, ಸುಭಾಷ್ ಕಟ್ಟಿಮನಿ, ನಾಗೇಶ ಕವಡಿಮಟ್ಟಿ, ಶೇಖರ ಢವಳಗಿ, ರೇವಣೆಪ್ಪ ಅಜಮನಿ, ಆನಂದ ಚವ್ಹಾಣ, ಶಿವಾನಂದ ಮಂಕಣಿ, ರವೀಂದ್ರ ಬಿರಾದಾರ ಇದ್ದರು.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.