Muddebihal: Congressmen got municipal council.. Mahbooba Golasangi is the president, Preeti Degina is the vice president.

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

ಮುದ್ದೇಬಿಹಾಳ : ಕೆಲವರಿಗೆ ಮಾತನಾಡುವ ಚಟ ಇರುತ್ತದೆ.ಅಂತೆಯೇ ಕೆಲವು ದಿನಗಳ ಹಿಂದೆ ಒಬ್ಬರು ಪತ್ರಿಕಾಗೋಷ್ಠಿ ನಡೆಸಿ (ಎ.ಎಸ್.ಪಾಟೀಲ್ ನಡಹಳ್ಳಿ) ಹಠಾತ್ ಸ್ಪೋಟದಂತೆ ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ ಅದು ಟುಸ್ ಬಾಂಬ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪುರಸಭೆಯ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಸಕರ ಸೂಚನೆಯಂತೆ ಕಾಂಗ್ರೆಸ್ ಸರ್ವ ಸದಸ್ಯರು ಒಮ್ಮತದಿಂದ ಈ ಫಲಿತಾಂಶ ಬಂದಿದೆ. ಕೆಲವು ಜನರಿಗೆ ಮಾತನಾಡುವ ಚಟ ಇರುತ್ತದೆ. ಟುಸ್ ಬಾಂಬ್ ಆಗಿದೆ. ಕಾಂಗ್ರೆಸ್ ಸರ್ಕಾರ ಇದ್ದು ಸಿಎಂ ಸಿದ್ಧರಾಮಯ್ಯನವರು, ನಗರಾಭಿವೃದ್ಧಿ ಸಚಿವರಿಂದ ವಿಶೇಷ ಅನುದಾನ ತಂದು ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದರು.

ಎಪಿಎಂಸಿ ಮಾಜಿ ಸದಸ್ಯ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯ ಕಾಮರಾಜ ಬಿರಾದಾರ ಮಾತನಾಡಿ, ಹೋರಾಟಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಆದ್ಯತೆ ನೀಡಲಾಗಿದೆ.ಅಭಿವೃದ್ಧಿ ವಿಷಯವಾಗಿ ಗೊಳಸಂಗಿ, ದೇಗಿನಾಳ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಶಾಸಕರು,ಕಾಮರಾಜ ಗೆಳೆಯರ ಬಳಗ,ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು ಗೊಳಸಂಗಿ ಅವರ ಬೆನ್ನಿಗಿದ್ದಾರೆ ಎಂದರು.

ಇದನ್ನೂ ಓದಿ: ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಅಸ್ಕಿ ಫೌಂಡೇಶನ್ ಉಪಾಧ್ಯಕ್ಷ ವೀರೇಶಗೌಡ ಅಸ್ಕಿ, ಮುಖಂಡರಾದ ಸದಾಶಿವ ಮಠ, ಸಂಗಪ್ಪ ಮೇಲಿನಮನಿ, ಟಿ.ವಿಜಯಭಾಸ್ಕರ್, ಸೋಮನಗೌಡ ಮೇಟಿ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೋಭಾ ಶೆಳ್ಳಗಿ, ಮಾಜಿ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ,ಅಕ್ಷತಾ ಚಲವಾದಿ ಇದ್ದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ