Muddebihal: Congressmen got municipal council.. Mahbooba Golasangi is the president, Preeti Degina is the vice president.

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

ಮುದ್ದೇಬಿಹಾಳ : ಕೆಲವರಿಗೆ ಮಾತನಾಡುವ ಚಟ ಇರುತ್ತದೆ.ಅಂತೆಯೇ ಕೆಲವು ದಿನಗಳ ಹಿಂದೆ ಒಬ್ಬರು ಪತ್ರಿಕಾಗೋಷ್ಠಿ ನಡೆಸಿ (ಎ.ಎಸ್.ಪಾಟೀಲ್ ನಡಹಳ್ಳಿ) ಹಠಾತ್ ಸ್ಪೋಟದಂತೆ ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ ಅದು ಟುಸ್ ಬಾಂಬ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪುರಸಭೆಯ ನೂತನ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಸಕರ ಸೂಚನೆಯಂತೆ ಕಾಂಗ್ರೆಸ್ ಸರ್ವ ಸದಸ್ಯರು ಒಮ್ಮತದಿಂದ ಈ ಫಲಿತಾಂಶ ಬಂದಿದೆ. ಕೆಲವು ಜನರಿಗೆ ಮಾತನಾಡುವ ಚಟ ಇರುತ್ತದೆ. ಟುಸ್ ಬಾಂಬ್ ಆಗಿದೆ. ಕಾಂಗ್ರೆಸ್ ಸರ್ಕಾರ ಇದ್ದು ಸಿಎಂ ಸಿದ್ಧರಾಮಯ್ಯನವರು, ನಗರಾಭಿವೃದ್ಧಿ ಸಚಿವರಿಂದ ವಿಶೇಷ ಅನುದಾನ ತಂದು ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದರು.

ಎಪಿಎಂಸಿ ಮಾಜಿ ಸದಸ್ಯ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯ ಕಾಮರಾಜ ಬಿರಾದಾರ ಮಾತನಾಡಿ, ಹೋರಾಟಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಆದ್ಯತೆ ನೀಡಲಾಗಿದೆ.ಅಭಿವೃದ್ಧಿ ವಿಷಯವಾಗಿ ಗೊಳಸಂಗಿ, ದೇಗಿನಾಳ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಶಾಸಕರು,ಕಾಮರಾಜ ಗೆಳೆಯರ ಬಳಗ,ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು ಗೊಳಸಂಗಿ ಅವರ ಬೆನ್ನಿಗಿದ್ದಾರೆ ಎಂದರು.

ಇದನ್ನೂ ಓದಿ: ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಅಸ್ಕಿ ಫೌಂಡೇಶನ್ ಉಪಾಧ್ಯಕ್ಷ ವೀರೇಶಗೌಡ ಅಸ್ಕಿ, ಮುಖಂಡರಾದ ಸದಾಶಿವ ಮಠ, ಸಂಗಪ್ಪ ಮೇಲಿನಮನಿ, ಟಿ.ವಿಜಯಭಾಸ್ಕರ್, ಸೋಮನಗೌಡ ಮೇಟಿ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೋಭಾ ಶೆಳ್ಳಗಿ, ಮಾಜಿ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ,ಅಕ್ಷತಾ ಚಲವಾದಿ ಇದ್ದರು.

Latest News

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ ಹೋದಾಗ ಒಣಗಿದ ಬೆಳೆಗಳನ್ನು ನೋಡಿದರೆ ಕಣ್ಣೀರು ಬರುತ್ತದೆ. ಅಧಿಕಾರಿಗಳು ಕಾಲುವೆಗೆ ನೀರು ಬಿಡಿ ಎಂದರೆ ತಯಾರಿಲ್ಲ.ಹೀಗೆ ಬದುಕುವ ಬದಲು ಸಾಯಲು ಅಧಿಕಾರಿಗಳೇ ವಿಷ ಕೊಡಿ ಎಂದು ರೈತ ಸಿದ್ದಪ್ಪ ಮಾದರ ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಕೃಷ್ಣಾ ಭಾಗ್ಯ ಜಲ ನಿಗಮದ ಎ.ಎಲ್.ಬಿ.ಸಿ. ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ