To what extent are we Lingayats practicing religion: MLA Vijayananda Kashappan's question

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರ
ಹೇಳಿದರು.

ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಸವ ಮಂಟಪದಲ್ಲಿ ಸೋಮವಾರ ಸಂಜೆ ನಡೆದ ಶ್ರಾವಣ ಮಾಸದ ವಚನ ದರ್ಶನ ಪ್ರವಚನ ಮಂಗಲ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ನಡೆದು ಬಂದ ಪಾರಂಪರಿಕ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದು. ಲಿಂಗಾಯತರು ಸಂಸ್ಕಾರ, ಸಂಸ್ಕೃತಿ ಜೊತಗೆ ಮಾನವೀಯತೆ ಕಲಿಸಿದ ಧರ್ಮ ಪಾಲನೆ ಮಾಡುವುದು ನಮ್ಮಲ್ಲರ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಧರ್ಮ ಪಾಲನೆಯನ್ನು ಮಾಡುವುದನ್ನು ಲಿಂಗಾಯತರು ಮರೆತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಮತ್ತು ಮೊಮ್ಮಕಳಿಗೆ ಧರ್ಮ ಪಾಲನೆಯನ್ನು ಕಡ್ಡಾಯವಾಗಿ ಮಾಡಿದರೆ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಚಿತ್ತರಗಿ ಸಂಸ್ಥಾನದ ಇಳಕಲ್‌ದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಬದುಕು ಕಟ್ಟಿಕೊಂಡವರು ಸಹ ಧಾರ್ಮಿಕ ಅಂಧ ಶ್ರದ್ಧೆ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಲಿಂಗಾಯತರು ಲಿಂಗಾಯತ ಧರ್ಮದಿಂದ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿರೂರಿನ ವಿಜಯ ಮಹಾಂತ ತೀರ್ಥದ ಬಸವಲಿಂಗ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರು ವಚನಗಳನ್ನು ಭಕ್ತಿಯಿಂದ ಓದಬೇಕು. ಲಿಂಗ ಪೂಜೆಯನ್ನು ಮಾಡಬೇಕು. ಹಣೆಯಲ್ಲಿ ವಿಭೂತಿಯನ್ನು ಧರಿಸಬೇಕು. ಮಕ್ಕಳಿಗೆ ಲಿಂಗವನ್ನು ಕಟ್ಟಬೇಕು ಎಂದು ತಿಳಿಸಿದರು.

ಸಂತೆ ಕಡೂರಿನ ನವಲಿಂಗ ಸ್ವಾಮೀಜಿ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮದ ಪ್ರವಚನಕಾರ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು.

ಎಸ್.ಎನ್.ಹಾದಿಮನಿ ಮತ್ತು ಭುವನೇಶ್ವರಿ ಮೆಣಸಿನಕಾಯಿ ಪ್ರವಚನ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಲಿಂಗಸೂರನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ವಿರಕ್ತಮಠದ ವಿರತಿಶಾನಂದ ಸ್ವಾಮೀಜಿ, ಡಾವಣಗೇರಿಯ ಬಸವಚೇತನ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷ ರಾಜವ್ವ ಬದಾಮಿ, ಉಪಸ್ಥಿತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ