Nandini ghee: Tirupati laddu effect.. Use Nandini ghee in state too: Govt

Nandini ghee: ತಿರುಪತಿ ಲಡ್ಡು ಎಫೆಕ್ಟ್.. ರಾಜ್ಯದಲ್ಲಿಯೂ ನಂದಿನಿ ತುಪ್ಪವನ್ನೇ ಬಳಸಿ: ಸರ್ಕಾರ

Nandini ghee: ತಿರುಪತಿ ಲಡ್ಡು ಎಫೆಕ್ಟ್.. ರಾಜ್ಯದಲ್ಲಿಯೂ ನಂದಿನಿ ತುಪ್ಪವನ್ನೇ ಬಳಸಿ: ಸರ್ಕಾರ

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ದೇಶ ವ್ಯಾಪಿ ಸುದ್ದಿಯಾದ ಬೆನ್ನಲ್ಲೇ ಜಾಗ್ರತೆ ವಹಿಸಿರುವ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ (Nadini ghee) ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಅನ್ನೋದನ್ನು ಟಿಟಿಡಿ ಒಪ್ಪಿಕೊಂಡಿದೆ. ಲಡ್ಡುಗೆ ಬಳಸಲಾಗಿರುವ ಕಚ್ಚಾವಸ್ತುಗಳ ಲ್ಯಾಬ್ ವರದಿ ಬಯಲಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ್ದ ಟಿಟಿಡಿ ಎಕ್ಸಿಕ್ಯೂಟಿವ್ ಅಧಿಕಾರಿ ಶ್ಯಾಮಲಾ ರಾವ್, ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಅದೇ ರೀತಿಯಾಗಿ ತಿರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ಅಚ್ಚರಿ ಏನಂದ್ರೆ.. ದನದ ಮಾಂಸದಿಂದ ತೆಗೆದ ಕೊಬ್ಬು, ಹಂದಿ ಮಾಂಸದ ಪದರದಿಂದ ತೆಗೆದ ಬಿಳಿ ಕೊಬ್ಬು ತುಪ್ಪದಲ್ಲಿ ಇರುವುದು ಕೂಡ ಬೆಳಕಿಗೆ ಬಂದಿದೆ.

ಇನ್ನು ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪವೇ ಹೋಗುತ್ತಿದೆ. ಆದರೆ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ 4 ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿರಲಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ನಿನ್ನೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್​ ಹೇಳಿದ್ದಾರೆ.

ವಿಪರ್ಯಾಸವೆಂದರೆ ಶ್ರೀರಾಮ ಜನ್ಮಭೂಮಿಯಲ್ಲಿ ನಡೆದ ಅದ್ಧೂರಿ ರಾಮ ಮಂದಿರ ಉದ್ಘಾಟನೆ ವೇಳೆ ಇದೇ ತಿರುಪತಿ ಲಡ್ಡುವನ್ನು ಅತಿಥಿಗಳಿಗೆ ಪ್ರಸಾದವಾಗಿ ನೀಡಲಾಗಿತ್ತು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ