ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಹೂಗಾರ ಸಮಾಜದವರಿಗೆ ಮಳಿಗೆ ಸ್ಥಾಪಿಸಿ: ಪ್ರದೀಪ ಹೂಗಾರ

ಮುದ್ದೇಬಿಹಾಳ : ಹೂಗಾರರ ಕುಲಕಸುಬು ಹೂವಿನ ವ್ಯಾಪಾರ ಮಾಡಲು ಪುರಸಭೆಯಿಂದ ಮಳಿಗೆಗಳನ್ನು ಸ್ಥಾಪಿಸಿ ಅನುಕೂಲ ಒದಗಿಸಿಕೊಡಬೇಕು ಎಂದು ಹೂಗಾರ ಸಮಾಜದ ಪ್ರಧಾನ ಕಾರ್ಯದರ್ಶಿ ಪ್ರದೀಪ ಹೂಗಾರ ಹೇಳಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಪೊಲೀಸ್ ಸ್ಟೇಷನ್ ಹತ್ತಿರ ಇರುವ ಶಿವಶರಣ ಹೂಗಾರ ಮಾದಯ್ಯನವರ ವೃತ್ತದಲ್ಲಿ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿವಶರಣ ಹೂಗಾರ ಮಾದಯ್ಯನವರ ಬಗ್ಗೆ ಬೆಳಕು ಚೆಲ್ಲುವ ಅಗತ್ಯವಿದೆ. ಅವರ ಬಗ್ಗೆ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ವಿಪುಲ ಅವಕಾಶಗಳಿವೆ. ವಿಶ್ವವಿದ್ಯಾಲಯಗಳಲ್ಲಿ ಹೂಗಾರ ಮಾದಯ್ಯ ಅವರ ಬಗ್ಗೆ ಅಧ್ಯಯನ ಕೇಂದ್ರ ಆರಂಭಿಸಬೇಕು ಎಂದರು.

ಪ್ರೋ.ಎಸ್.ಎಸ್.ಹೂಗಾರ ಮಾತನಾಡಿ, ಬಸವಣ್ಣನವರು ಸಾರಿದ ಕಾಯಕವೇ ಕೈಲಾಸ ಎಂಬುದಕ್ಕೆ ಮಾದಯ್ಯ ಉತ್ತಮ ನಿದರ್ಶನವಾಗಿದ್ದರು. ಅವರು ರಚಿಸಿದ ಕೆಲವೇ ವಚನಗಳು ಲಭ್ಯವಾಗಿವೆ. ಆ ವಚನಗಳಲ್ಲಿ ಅವರು ಸಾಮಾಜಿಕ ಸಮಾನತೆ, ಮೂಢನಂಬಿಕೆ, ಅಂಧಶ್ರದ್ಧೆಯ ಬಗ್ಗೆ ಉಲ್ಲೇಖಿಸಿದ್ದಾರೆ’ ಎಂದರು.

ಮುಖಂಡರಾದ ಬಸವರಾಜ್ ಹೂಗಾರ, ಚಂದ್ರಶೇಖರ ಹೂಗಾರ, ಎಚ್ ಕೆ ಪೂಜಾರಿ, ಮಾಂತೇಶ ವಡವಡಗಿ, ಬಸವರಾಜ ವಡವಡಗಿ, ವಿಜಯಕುಮಾರ ವಡವಡಗಿ, ಸಂತೋಷ ಹೂಗಾರ, ಸಂತೋಷ ಹೂಗಾರ,ಶಿವರಾಜ ಹೂಗಾರ, ಶರಣು ಹೂಗಾರ, ಪ್ರಕಾಶ ಹೂಗಾರ ,ಮುತ್ತಣ್ಣ ಹೂಗಾರ,ಡಾ.ಚಂದ್ರಶೇಖರ ಹೂಗಾರ, ಅಜಿತ ಹೂಗಾರ ಇದ್ದರು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ