10.33 lakhs profit for Koluru Agricultural Co-operative Society

ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ

ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ

Ad
Ad

ಮುದ್ದೇಬಿಹಾಳ : ರೈತರ ಸಹಕಾರದಿಂದ ಈ ಸಾಲಿನ ಆರ್ಥಿಕ ವರ್ಷ ಅಂತ್ಯಗೊಂಡ ಅವಧಿಯವರೆಗೆ ಸಂಘವು ಒಟ್ಟು 10.33 ಲಕ್ಷ ಲಾಭ ಗಳಿಸಿದೆ ಎಂದು ತಾಲ್ಲೂಕಿನ ಕೋಳೂರು ಎಲ್.ಟಿ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಸೀತಿಮನಿ ಹೇಳಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕು ಕೋಳೂರು ತಾಂಡಾದ ದುರ್ಗಾದೇವಿ ಸಂತ ಸೇವಾಲಾಲ್ ಅವರ ದೇವಸ್ಥಾನದಲ್ಲಿ ಶನಿವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಸಹಕಾರಿ ಸಂಘದ ಬೆಳವಣಿಗೆಗೆ ರೈತರು ಕಾರಣರಾಗಿದ್ದು ಸಂಘಕ್ಕೆ ಭಾರವಾಗದಂತೆ ತಮ್ಮಿಂದಲೂ ದೇಣಿಗೆ ನೀಡಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ ಸಂಘದ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲು ಸಚಿವರು, ವಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ್ ಅವರನ್ನು ಕರೆಯಿಸಲಾಗುತ್ತದೆ. ವಿವಿಧ ಮಠಗಳ ಸ್ವಾಮೀಜಿಗಳನ್ನು ಆಹ್ವಾನಿಸಲಾಗುತ್ತದೆ. ಇದಕ್ಕೆ ರೈತರ ಸಹಕಾರ ಅಗತ್ಯವಾಗಿದೆ ಎಂದರು.

ತಾಂಡಾದ ಮುಖಂಡ ರವಿ ನಾಯಕ ಮಾತನಾಡಿ, ನಿಸ್ವಾರ್ಥ ಸೇವೆ ಸಲ್ಲಿಸಿದ್ದರಿಂದಲೇ ಇಂದು ಸಂಘವು ಪ್ರಗತಿಯತ್ತ ಸಾಗಿದೆ. ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಸಂಘದ ಕಟ್ಟಡದ ಉದ್ಘಾಟನಾ ಸಮಾರಂಭ ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ಲೆಕ್ಕಪತ್ರವನ್ನು ಅಶೋಕ ಲಮಾಣಿ ಓದಿದರು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ನಿರ್ದೇಶಕರಾದ ಅಯ್ಯಪ್ಪ ಬಿದರಕುಂದಿ, ಯಲಗೂರದಪ್ಪ ಝಳಕಿ, ಭೀಮಪ್ಪ ವಾಲೀಕಾರ,ಮಲ್ಲಪ್ಪ ತಾರನಾಳ, ಚನ್ನಬಸಪ್ಪ ಕೋಳೂರ, ರೀತಿಬಾಯಿ ಲಮಾಣಿ, ಮಲ್ಲಮ್ಮ ಹಳ್ಳೂರ, ಗುರುಬಾಯಿ ಜಾಧವ,ಚೆನ್ನವ್ವ ಬಯ್ಯಾಪೂರ, ಹೋಬಾ ನಾಯಕ ಧರ್ಮಗಿರಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಂಗಯ್ಯ ಹೊನ್ನಳ್ಳಿ ಇದ್ದರು.

ಇದನ್ನೂ ಓದಿ: ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500