Decision for indefinite strike of village administrators from September 26

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಸೆ.26 ರಿಂದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಮುದ್ದೇಬಿಹಾಳ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26 ರಂದು ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಪ್ರಧಾನ ಕಾರ್ಯದರ್ಶಿ ರಿಯಾಜ್ ನಾಯ್ಕೋಡಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹೋರಾಟದಲ್ಲಿ ಭಾಗಿಯಾಗುವ ಕುರಿತು ತಹಶೀಲ್ದಾರ್‌ಗೆ ಬರೆದ ಮನವಿಯನ್ನು ಶಿರಸ್ತೇದಾರ್‌ರಿಗೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್ , ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 17ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಸಕಾಲಕ್ಕೆ ಕೆಲಸಗಳು ಆಗದೇ ಇರುವುದಕ್ಕೆ ಸಾರ್ವಜನಿಕರಿಂದ ಮಾರಣಾಂತಿಕ ಹಲ್ಲೆಯಂತಹ ಘಟನೆಗಳು ನಡೆದಿವೆ.ಗ್ರಾಮ ಆಡಳಿತಾಧಿಕಾರಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಮೂಲಸೌರ‍್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳನ್ನು ಗ್ರಾಮ ಆಡಳಿತ ಅಧಿಕಾರಿ ಗ್ರೇಡ್-1 ಹುದ್ದೆಯನ್ನಾಗಿ ಪದೋನ್ನತಿ ನೀಡಬೇಕು. ಅಂತರ್‌ ಜಿಲ್ಲಾ ಪತಿ-ಪತ್ನಿ ಪ್ರಕರಣಗಳಿಗೆ ಚಾಲನೆ ನೀಡಬೇಕು.

ಈಗಾಗಲೇ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ಮಾಡಬೇಕು ಎಂಬುದು ಸೇರಿದಂತೆ ಮೂಲಭೂತ ಸೌರ‍್ಯಗಳನ್ನು ಕಲ್ಪಿಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿ ಸೆ.26 ರಂದು ಅನಿರ್ದಿಷ್ಟಾವಧಿಯ ಧರಣಿ ನಡೆಸುವುದಾಗಿ ತಿಳಿಸಿದರು.ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯ ಸಂಘದ ನಿರ್ಣಯದಂತೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಸ್ವೀಕರಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳಾದ ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ತಳವಾರ ಮೊದಲಾವರು ಇದ್ದರು.

ಇದನ್ನೂ ಓದಿ: ಬಾಲಾಜಿ ಶುಗರ‍್ಸ್ ಎಂ.ಡಿ. ವೆಂಕಟೇಶಗೌಡರ ಸ್ಮರಣೆ: ಕೇಸಾಪುರ, ಹುನಕುಂಟಿಯಲ್ಲಿ ಶುದ್ಧ ಕುಡಿವ ನೀರಿನ ಘಟಕ ಉದ್ಘಾಟನೆ

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ