ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು