ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ