ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ