Both officers in charge of the BEO chair! Embarrassing staff

ಪ್ರಭಾರ ಬಿಇಒ ಕುರ್ಚಿಗೆ ಇಬ್ಬರೂ ಅಧಿಕಾರಿಗಳು! ಮುಜುಗರಕ್ಕೀಡು ಆಗುತ್ತಿರುವ ಸಿಬ್ಬಂದಿ

ಪ್ರಭಾರ ಬಿಇಒ ಕುರ್ಚಿಗೆ ಇಬ್ಬರೂ ಅಧಿಕಾರಿಗಳು! ಮುಜುಗರಕ್ಕೀಡು ಆಗುತ್ತಿರುವ ಸಿಬ್ಬಂದಿ

ವರದಿ: ಕಿರಣಗೌಡ ಹಳೆಮನಿ

ಸಿಂಧನೂರು : ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತವಾಗುತ್ತಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಒಂದೇ ಕುರ್ಚಿಗೆ ಇಬ್ಬರೂ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇರುವುದರಿಂದ ಅಧಿಕಾರಿಗಳ ವರ್ಗಕ್ಕೆ ಹಾಗೂ ಸಿಬ್ಬಂದಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕೆಲವು ತಿಂಗಳ ಹಿಂದೆ ಇದ್ದ ಬಿಇಒ ಸೋಮಶೇಖರಗೌಡ ವರ್ಗಾವಣೆಯಾದ ನಂತರ ಖಾಲಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕುರ್ಚಿಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಸವಲಿಂಗಪ್ಪ ಅಧಿಕಾರವನ್ನು ವಹಿಸಿಕೊಂಡು ಕಾರ್ಯವನ್ನು ನಿರ್ವಹಿಸುತ್ತಿದ್ದರು.

ಶತಾಯಗತಾಯ ಪ್ರಯತ್ನ

ಆದರೆ, ಕಾರಣಾಂತರಗಳಿಂದ ಕೆಲಸ ನಿರ್ವಹಿಸಲು ಆಗುತ್ತಿಲ್ಲ ಒತ್ತಡವಾಗುತ್ತಿದ್ದು, ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ನಿಯೋಜನೆಗೆ ಮೇಲ್ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ತಾವೇ ಸ್ವತಃ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧಿಕಾರದ ಗದ್ದುಗೆಗೆ ಯಾರನ್ನಾದರೂ ನಿಯೋಜನೆ ಮಾಡಿ ಎಂದು ಸಂಬಂಧಪಟ್ಟ ಮೇಲಾಧಿಕಾರಿಗಳ ಕಚೇರಿಗಳಿಗೆ ಅಲೆದಾಟ ಮಾಡಿ, ಬೆಂಗಳೂರುವರೆಗೂ ಹೋಗಿ ತಮ್ಮ ಮೇಲಿರುವ ಭಾರವನ್ನು ಕೆಳಗಿಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನವನ್ನು ಕೂಡ ಮಾಡಿದ್ದಾರೆ.

ಈಗ, ಕೆಲವು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯವನ್ನು ನಿರ್ವಹಿಸುತ್ತಿರುವ ವಾಜೀದಾ ಮಜೀದ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವ ಹಾಗಾಗಿದೆ. ನೂತನವಾಗಿ ಅಧಿಕಾರವನ್ನು ಸ್ವೀಕರಿಸಿಕೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದುವರೆಗೂ ಕೂಡ ಅಧಿಕಾರಿಗಳ ಸಭೆಯನ್ನು ಮಾಡದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದ ಅಧಿಕಾರಿಗಳು ಯಾರ ಮಾತು ಕೇಳಬೇಕೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹತ್ತಿರ ಯಾವುದಾದರೂ ಕೆಲಸದ ಪತ್ರಗಳಿಗೆ ರುಜು ಮಾಡಿಸಲು ಹೋದರೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಅವರನ್ನೇ ಕೇಳಿ ಎಂದು ಹೇಳುತ್ತಿರುವುದು ಮುಜುಗರಕ್ಕೀಡು ಮಾಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಹೆಸರು ಹೇಳಲು ಬಯಸದ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ