Both officers in charge of the BEO chair! Embarrassing staff

ಪ್ರಭಾರ ಬಿಇಒ ಕುರ್ಚಿಗೆ ಇಬ್ಬರೂ ಅಧಿಕಾರಿಗಳು! ಮುಜುಗರಕ್ಕೀಡು ಆಗುತ್ತಿರುವ ಸಿಬ್ಬಂದಿ

ಪ್ರಭಾರ ಬಿಇಒ ಕುರ್ಚಿಗೆ ಇಬ್ಬರೂ ಅಧಿಕಾರಿಗಳು! ಮುಜುಗರಕ್ಕೀಡು ಆಗುತ್ತಿರುವ ಸಿಬ್ಬಂದಿ

ವರದಿ: ಕಿರಣಗೌಡ ಹಳೆಮನಿ

ಸಿಂಧನೂರು : ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತವಾಗುತ್ತಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಒಂದೇ ಕುರ್ಚಿಗೆ ಇಬ್ಬರೂ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇರುವುದರಿಂದ ಅಧಿಕಾರಿಗಳ ವರ್ಗಕ್ಕೆ ಹಾಗೂ ಸಿಬ್ಬಂದಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕೆಲವು ತಿಂಗಳ ಹಿಂದೆ ಇದ್ದ ಬಿಇಒ ಸೋಮಶೇಖರಗೌಡ ವರ್ಗಾವಣೆಯಾದ ನಂತರ ಖಾಲಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕುರ್ಚಿಗೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಸವಲಿಂಗಪ್ಪ ಅಧಿಕಾರವನ್ನು ವಹಿಸಿಕೊಂಡು ಕಾರ್ಯವನ್ನು ನಿರ್ವಹಿಸುತ್ತಿದ್ದರು.

ಶತಾಯಗತಾಯ ಪ್ರಯತ್ನ

ಆದರೆ, ಕಾರಣಾಂತರಗಳಿಂದ ಕೆಲಸ ನಿರ್ವಹಿಸಲು ಆಗುತ್ತಿಲ್ಲ ಒತ್ತಡವಾಗುತ್ತಿದ್ದು, ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ನಿಯೋಜನೆಗೆ ಮೇಲ್ಮಟ್ಟದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ತಾವೇ ಸ್ವತಃ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧಿಕಾರದ ಗದ್ದುಗೆಗೆ ಯಾರನ್ನಾದರೂ ನಿಯೋಜನೆ ಮಾಡಿ ಎಂದು ಸಂಬಂಧಪಟ್ಟ ಮೇಲಾಧಿಕಾರಿಗಳ ಕಚೇರಿಗಳಿಗೆ ಅಲೆದಾಟ ಮಾಡಿ, ಬೆಂಗಳೂರುವರೆಗೂ ಹೋಗಿ ತಮ್ಮ ಮೇಲಿರುವ ಭಾರವನ್ನು ಕೆಳಗಿಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನವನ್ನು ಕೂಡ ಮಾಡಿದ್ದಾರೆ.

ಈಗ, ಕೆಲವು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯವನ್ನು ನಿರ್ವಹಿಸುತ್ತಿರುವ ವಾಜೀದಾ ಮಜೀದ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವ ಹಾಗಾಗಿದೆ. ನೂತನವಾಗಿ ಅಧಿಕಾರವನ್ನು ಸ್ವೀಕರಿಸಿಕೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದುವರೆಗೂ ಕೂಡ ಅಧಿಕಾರಿಗಳ ಸಭೆಯನ್ನು ಮಾಡದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದ ಅಧಿಕಾರಿಗಳು ಯಾರ ಮಾತು ಕೇಳಬೇಕೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹತ್ತಿರ ಯಾವುದಾದರೂ ಕೆಲಸದ ಪತ್ರಗಳಿಗೆ ರುಜು ಮಾಡಿಸಲು ಹೋದರೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಅವರನ್ನೇ ಕೇಳಿ ಎಂದು ಹೇಳುತ್ತಿರುವುದು ಮುಜುಗರಕ್ಕೀಡು ಮಾಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಹೆಸರು ಹೇಳಲು ಬಯಸದ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ