Hemareddy Matei who lashed out at the previous administration

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಹಿಂದಿನ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ ಹೇಮರೆಡ್ಡಿ ಮೇಟಿ

ಮುದ್ದೇಬಿಹಾಳ : 40 ವರ್ಷಗಳ ಅವಧಿಯಲ್ಲಿ ಈ ಹಿಂದಿನ ಆಡಳಿತ ಮಂಡಳಿಯವರು ರೈತರಿಗೆ ಕೊಟ್ಟಿದ್ದ ಸಾಲದ ಪ್ರಮಾಣಕ್ಕಿಂತಲೂ ಅದರ ದುಪ್ಪಟ್ಟು ಸಂಖ್ಯೆಯ ರೈತರಿಗೆ ನಾವು ಅಧಿಕಾರ ವಹಿಸಿಕೊಂಡ ನಾಲ್ಕೂವರೆ ವರ್ಷದ ಅವಧಿಯಲ್ಲಿ ಸಾಲ ವಿತರಣೆ ಮಾಡಿದ್ದೇವೆ ಎಂದು ಬಸರಕೋಡ ವಿವಿಧೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಬ.ಮೇಟಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಬಸರಕೋಡ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದಿಂದ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರ ವಹಿಸಿಕೊಂಡು ಮಾತು ಕೊಟ್ಟಂತೆ ರೈತರಿಗೆ ರಸಗೊಬ್ಬರ, ಬೀಜ ಹಾಗೂ ಕೀಟನಾಶಕ ಸ್ಥಳೀಯವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ರಸಗೊಬ್ಬರ ಮಳಿಗೆ ತೆರೆಯಲಾಗಿದ್ದು ಒಂದೇ ವರ್ಷದಲ್ಲಿ 1.22 ಕೋಟಿ ರೂಪಾಯಿ ಬೀಜ, ಗೊಬ್ಬರ, ಕೀಟನಾಶಕ ಖರೀದಿಸಿದ್ದು 92.26 ಲಕ್ಷ ರೂಪಾಯಿ ಗಳಷ್ಟು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟವಾಗಿದೆ ಎಂದು ತಿಳಿಸಿದರು.

ಮುಂಬರುವ ವರ್ಷದಲ್ಲಿ ಈ ಭಾಗದ ರೈತರಿಗೆ ದ್ರಾಕ್ಷಿ ಸಂಸ್ಕರಣೆಗೆ ಕೋಲ್ಡ್ ಸ್ಟೋರೇಜ್ ತೆರೆಯುವ ಉದ್ದೇಶ ಇಟ್ಟುಕೊಂಡಿದ್ದು ಬಸರಕೋಡದ ಸಂಘಕ್ಕೆ ಸ್ವಂತ ಕಟ್ಟಡವನ್ನು ನಿರ್ಮಿಸಿ ಮುಂದಿನ ವರ್ಷದಲ್ಲಿ ರೈತರ ಸಭೆಯನ್ನು ಅಲ್ಲಿಯೇ ನಡೆಸುವುದಾಗಿ ತಿಳಿಸಿದರು.

ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ರವಿ ಗುರಿಕಾರ, ಪವಾಡ ಬಸವೇಶ್ವರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ ಡಿ.ಬಿ.ಬೇಲಾಳ, ಪಬ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ, ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರೀಗಳು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಬಾಬು ಸೂಳಿಭಾವಿ, ನಿರ್ದೇಶಕರಾದ ಸಿಂಧೂಬಲ್ಲಾಳ ನಾಡಗೌಡ, ಸುನೀಲ ಸೂಳಿಭಾವಿ, ಸೋಮಪ್ಪ ಮೇಟಿ, ಬಸವರಾಜ ಪಾಟೀಲ್, ಲಕ್ಕಪ್ಪ ಸೋಮನಾಳ, ಶಾಂತಪ್ಪ ಸಂಕನಾಳ, ಮಡಿವಾಳಪ್ಪ ತಳವಾರ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ, ಯಲ್ಲಪ್ಪ ಚಲವಾದಿ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎ.ಎಸ್.ಸಾಲಿಮಠ, ಮಾಣಿಕ ಸಗರಿ, ಪ್ರಭಾರ ಸಿಇಒ ಬಸನಗೌಡ ಕೊಣ್ಣೂರ ಮೊದಲಾದವರು ಇದ್ದರು.ಪ್ರಕಾಶ ಗೋಂಧಳೆ ನಿರೂಪಿಸಿದರು.

ಹಿಂದಿನ ಆಡಳಿತ ಮಂಡಳಿಯ ವಿರುದ್ಧ ವಾಗ್ದಾಳಿ

ಸಂಘದಲ್ಲಿ ಎಫ್.ಡಿ ಇಟ್ಟಿರುವವರಿಗೆ ಹಣ ಮರಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಹಿಂದಿನ ಆಡಳಿತ ಮಂಡಳಿಯವರು, ಸಿಇಒ ಈವರೆಗೂ ಆ ದಾಖಲೆಗಳನ್ನು ಸಂಘಕ್ಕೆ ಒಪ್ಪಿಸಿಲ್ಲ. ಹೀಗಾಗಿ ಜನರಿಗೆ ಅವರು ಇಟ್ಟಿರುವ ಹಣ ಕೊಡಲು ಆಗುತ್ತಿಲ್ಲ. ನಿಮ್ಮ ಹಣ ಎಲ್ಲೂ ಹೋಗಿಲ್ಲ ಬ್ಯಾಂಕಿನಲ್ಲಿ ಜಮೆ ಇದೆ. ಆದರೆ ಹಿಂದಿನ ಆಡಳಿತ ಮಂಡಳಿಯವರು ದಾಖಲೆಗಳನ್ನು ಕೊಟ್ಟಿರುವುದಾಗಿ ಜನರೆದುರಿಗೆ ತಪ್ಪು ಮಾಹಿತಿ ನೀಡುತ್ತಾ ಹೋಗುತ್ತಿದ್ದಾರೆ. ಪ್ರತಿವರ್ಷ ಇದನ್ನು ಹೇಳುವುದಕ್ಕೆ ನಮಗೂ ಬೇಸರವಾಗಿದೆ ಎಂದು ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹಿಂದಿನ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ