Murder Case Image of murder symbol

ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!

ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!

ಹೊಸಕೋಟೆ; ಜಮೀನು ವಿಚಾರಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ದಬ್ಬಗುಂಟಹಳ್ಳಿಯ ಗೋವಿಂದಪ್ಪ (53 ವರ್ಷ) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಮಂಜುನಾಥ್ (42 ವರ್ಷ) ಕೊಲೆ ಮಾಡಿದ ಆರೋಪಿ.

ಕೊಲೆಯಾದ ಗೋವಿಂದಪ್ಪನಿಗೆ ಮಂಜುನಾಥ್ ಬಾಮೈ ದನಾಗಬೇಕು. 20 ಗುಂಟೆ ಜಮೀನು ವಿಚಾರಕ್ಕೆ ಇಬ್ಬರೂ ಆಗಾಗ್ಗೆ ಜಗಳ ಮಾಡಿ ಕೊಳ್ಳುತ್ತಿದ್ದರು. ಗ್ರಾಮಸ್ಥರು ಜಗಳವನ್ನು ತಿಳಿಗೊಳಿಸುತ್ತಿದ್ದರು.

ಆದರೆ ಮಂಗಳವಾರ ಬೆಳಿಗ್ಗೆ ಗೋವಿಂದಪ್ಪ ಜಮೀನಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಂಜುನಾಥ್ ಗೋವಿಂದಪ್ಪನನ್ನು ಅಡ್ಡಗಟ್ಟಿ ಜಗಳ ತೆಗೆದ ಸಂದರ್ಭದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್ ದೊಣ್ಣೆಯಿಂದ ಬಲವಾಗಿ ಗೋವಿಂದಪ್ಪ ಅವರ ತಲೆಗೆ ಬಾರಿಸಿದ್ದಾರೆ. ಈ ವೇಳೆ ತಲೆಗೆ ಭಾರಿ ಪೆಟ್ಟಾಗಿ ಅಧಿಕ ರಕ್ತಸ್ರಾವವಾಗಿದ್ದ ಗೋವಿಂದಪ್ಪರನ್ನು ಸ್ಥಳೀಯರು ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ದಾಖಲಿಸಿದರೂ ಗೋವಿಂದಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಡಿವೈ ಎಸ್ಪಿ ಅಣ್ಣಾಸಾಹೇಬ್ ಪಾಟೀಲ್, ಪಿಐ ಅಶೋಕ್ ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಕೊಲೆ ಮಾಡಿದ ಆರೋಪಿ ಮಂಜುನಾಥ್‌ರನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಎಸ್ಪಿ ಭೇಟಿ, ಪರಿಶೀಲನೆ: ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, ಎಎಸ್ಪಿ ನಾಗೇಶ್ ಕುಮಾರ್‌ ದಬ್ಬಗುಂಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕೊಲೆ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದರು.

ಡಿವೈಎಸ್ಪಿ ಅಣ್ಣ ಸಾಹೇಬ್ ಪಾಟೀಲ್ ಅವರಿಂದ ಮಾಹಿತಿಯನ್ನು ಪಡೆದರು. ಬೆರಳಚ್ಚು ತಜ್ಞರು ಭೇಟಿ ನೀಡಿ ಅಗತ್ಯವಾದ ಮಾಹಿತಿಯನ್ನು ಸಂಗ್ರಹಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ