Murder Case Image of murder symbol

ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!

ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!

Ad
Ad

ಹೊಸಕೋಟೆ; ಜಮೀನು ವಿಚಾರಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Ad
Ad

ದಬ್ಬಗುಂಟಹಳ್ಳಿಯ ಗೋವಿಂದಪ್ಪ (53 ವರ್ಷ) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಮಂಜುನಾಥ್ (42 ವರ್ಷ) ಕೊಲೆ ಮಾಡಿದ ಆರೋಪಿ.

ಕೊಲೆಯಾದ ಗೋವಿಂದಪ್ಪನಿಗೆ ಮಂಜುನಾಥ್ ಬಾಮೈ ದನಾಗಬೇಕು. 20 ಗುಂಟೆ ಜಮೀನು ವಿಚಾರಕ್ಕೆ ಇಬ್ಬರೂ ಆಗಾಗ್ಗೆ ಜಗಳ ಮಾಡಿ ಕೊಳ್ಳುತ್ತಿದ್ದರು. ಗ್ರಾಮಸ್ಥರು ಜಗಳವನ್ನು ತಿಳಿಗೊಳಿಸುತ್ತಿದ್ದರು.

ಆದರೆ ಮಂಗಳವಾರ ಬೆಳಿಗ್ಗೆ ಗೋವಿಂದಪ್ಪ ಜಮೀನಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಂಜುನಾಥ್ ಗೋವಿಂದಪ್ಪನನ್ನು ಅಡ್ಡಗಟ್ಟಿ ಜಗಳ ತೆಗೆದ ಸಂದರ್ಭದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್ ದೊಣ್ಣೆಯಿಂದ ಬಲವಾಗಿ ಗೋವಿಂದಪ್ಪ ಅವರ ತಲೆಗೆ ಬಾರಿಸಿದ್ದಾರೆ. ಈ ವೇಳೆ ತಲೆಗೆ ಭಾರಿ ಪೆಟ್ಟಾಗಿ ಅಧಿಕ ರಕ್ತಸ್ರಾವವಾಗಿದ್ದ ಗೋವಿಂದಪ್ಪರನ್ನು ಸ್ಥಳೀಯರು ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ದಾಖಲಿಸಿದರೂ ಗೋವಿಂದಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಡಿವೈ ಎಸ್ಪಿ ಅಣ್ಣಾಸಾಹೇಬ್ ಪಾಟೀಲ್, ಪಿಐ ಅಶೋಕ್ ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಕೊಲೆ ಮಾಡಿದ ಆರೋಪಿ ಮಂಜುನಾಥ್‌ರನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಎಸ್ಪಿ ಭೇಟಿ, ಪರಿಶೀಲನೆ: ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, ಎಎಸ್ಪಿ ನಾಗೇಶ್ ಕುಮಾರ್‌ ದಬ್ಬಗುಂಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕೊಲೆ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದರು.

ಡಿವೈಎಸ್ಪಿ ಅಣ್ಣ ಸಾಹೇಬ್ ಪಾಟೀಲ್ ಅವರಿಂದ ಮಾಹಿತಿಯನ್ನು ಪಡೆದರು. ಬೆರಳಚ್ಚು ತಜ್ಞರು ಭೇಟಿ ನೀಡಿ ಅಗತ್ಯವಾದ ಮಾಹಿತಿಯನ್ನು ಸಂಗ್ರಹಿಸಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500