Lorry-car head-on collision, four died on the spot

ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

ಹುನಗುಂದ/ಮುದ್ದೇಬಿಹಾಳ : ಲಾರಿ – ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ ಘಟನೆ ಹುನಗುಂದ ತಾಲ್ಲೂಕಿನ ಧನ್ನೂರ ಟೋಲ್ ನಾಕಾ ಸಮೀಪದಲ್ಲಿ ಗುರುವಾರ ನಡೆದಿದೆ.

ಮೃತರನ್ನು ಮುದ್ದೇಬಿಹಾಳ ತಾಲ್ಲೂಕು ಬಿದರಕುಂದಿಯ ಪ್ರಥಮ ದರ್ಜೆ ಗುತ್ತಿಗೆದಾರ ಲಕ್ಷ್ಮಣ ವಡ್ಡರ,ಬೈಲಪ್ಪ ಬಿರಾದಾರ, ಕಾರು ಚಾಲಕ ಮಹ್ಮದರಫೀಕ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕಮಕ್ಕಳ ಮೃತಪಟ್ಟವರು.

ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಮುದ್ದೇಬಿಹಾಳ ಪುರಸಭೆ ಸದಸ್ಯ ಯಲ್ಲಪ್ಪ ನಾಯಕಮಕ್ಕಳ ಮಾಹಿತಿ ನೀಡಿದ್ದಾರೆ.

ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.