Honor to PM Narendra Modi if he shows a spotless BJP: CM Siddaramaiah

ಕಳಂಕ ರಹಿತ ಬಿಜೆಪಿಗನ ತೋರಿಸಿದರೆ PM Narendra Modiಗೆ ಸನ್ಮಾನ: CM Siddaramaiah

ಕಳಂಕ ರಹಿತ ಬಿಜೆಪಿಗನ ತೋರಿಸಿದರೆ PM Narendra Modiಗೆ ಸನ್ಮಾನ: CM Siddaramaiah

ಬೆಂಗಳೂರು; ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪಂಥಾಹ್ವಾನ ನೀಡಿದ್ದಾರೆ

ಈ ಕುರಿತು ಪ್ರಕಟಣೆ ನೀಡಿರುವ ಸಿಎಂ ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ ಎಂದು ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ?

ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ.

ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ?

ಪ್ರಧಾನಿ ನರೇಂದ್ರ ಮೋದಿ ಅವರೇ,
ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?

ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ.

ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಬಹಿರಂಗ ಸವಾಲೆಸೆದಿದ್ದಾರೆ.

ಇದನ್ನೂ ಓದಿ: Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

Latest News

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ.. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿ ನಡೆದಿರುವ ಘಟನೆ ಇದು.. ಆತನಿಗೆ 30 ವರ್ಷ, ಆಕೆಗೆ 21 ವರ್ಷ.. ಇಬ್ಬರು ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳು.. ಸಂಬಂಧದಲ್ಲಿ ಅಣ್ಣ-ತಂಗಿ. ಈ ಪವಿತ್ರ ಬಂಧಕ್ಕೆ ವಿರುದ್ದವಾಗಿ ಅಕ್ರಮ ಸಂಬಂಧ ಹೊಂದಿದ್ರು.. ದುಡಿಮೆಗೆ ಅಂತ ಊರು ಬಿಟ್ಟು ಬಂದಿದ್ದ ರಾಮಲಕ್ಷ್ಮಿ ಹಾಗೂ ಕೃಷ್ಣ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ