ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಹೋರಾಟ ತೀವ್ರಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳು

ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಹೋರಾಟ ತೀವ್ರಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳು

ಮುದ್ದೇಬಿಹಾಳ : ಮೂಲಸೌರ‍್ಯಗಳನ್ನೂ ಒದಗಿಸದೇ ತಾಂತ್ರಿಕ ಕೆಲಸಗಳನ್ನು ಮಾಡಲು ಒತ್ತಡ ಹೇರುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಲೇಖನಿ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಗುರುವಾರದಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. 100ಕ್ಕೂ ಅಧಿಕ ಸೇವೆಗಳನ್ನು ಗ್ರಾಮ ಆಡಳಿತಾಧಿಕಾರಿಗಳು ತುಂಬಾ ಒತ್ತಡದಲ್ಲಿ ಕೆಲಸ ಮಾಡಬೇಕಾಗಿದೆ. ಲ್ಯಾಪ್‌ಟಾಪ್, ಇಂಟರ್‌ನೆಟ್ ಮೂಲಕ ಮಾಡಬೇಕಾದ ಸೇವೆಗಳನ್ನು ಅಗತ್ಯ ಭೌತಿಕ ಸಾಮಗ್ರಿ ನೀಡದೇ ಕೆಲಸ ಮಾಡಲು ಸರ್ಕಾರ ಒತ್ತಡ ಹೇರುತ್ತಿದೆ.ಸರ್ಕಾರಿ ನೌಕರಿ ಯಾಕಾದರೂ ಮಾಡುತ್ತಿದ್ದೇವೆ ಎಂಬ ಬೇಸರದ ಭಾವನೆ ಮೂಡಿದೆ. ಇದರಿಂದ ನೌಕರರ ಮಾನಸಿಕ ಸ್ಥಿತಿ,ಕೌಟುಂಬಿಕ ಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಹೇಳಿದರು.

ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ ನಾಯ್ಕೋಡಿ ಮಾತನಾಡಿ, ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸಬೇಕು. ಸುಮಾರು 17ಕ್ಕೂ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು ಇವುಗಳ ನಿರ್ವಹಣೆಗೆ ಅವಶ್ಯಕತೆಯಾಗಿರುವ ಮೊಬೈಲ್, ಲ್ಯಾಪಟಾಪ್, ಇಂಟರನೆಟ್, ಸ್ಕ್ಯಾನರ್ ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ರಾಜ್ಯದಲ್ಲಿ 50ಕ್ಕೂ ಅಧಿಕ ನೌಕರರು ಒತ್ತಡ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಸಂಖ್ಯೆ ಇನ್ನೂ ಹೆಚ್ಚುವ ಮುನ್ನ ಸರ್ಕಾರ ತಕ್ಷಣ ಮಧ್ಯೆಪ್ರವೇಶಿಸಿ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಬೇಕು ಎಂದರು.

ಕಂದಾಯ ನೌಕರರ ಸಂಘದ ಮುಖಂಡ ವೆಂಕಟೇಶ ಅಂಬಿಗೇರ, ಗ್ರಾಮ ಆಡಳಿತ ಅಧಿಕಾರಿ ರಫೀಕ ಮುಲ್ಲಾ, ಶ್ರೀನಿವಾಸ ಹುನಗುಂದ ಮಾತನಾಡಿದರು.

ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ, ದಲಿತ ಮುಖಂಡರಾದ ಹರೀಶ ನಾಟೀಕಾರ, ಪ್ರಕಾಶ ಚಲವಾದಿ, ಆನಂದ ದೇವೂರ ಮತ್ತಿತರರು ಬೆಂಬಲಿಸಿದರು. ಹೋರಾಟದ ಸ್ಥಳದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿರ್ವಹಿಸಬೇಕಾದ ಸೇವೆಗಳನ್ನು ಒಂದೇ ಫಲಕದಲ್ಲಿ ಹಾಕಿದ್ದು ಗಮನ ಸೆಳೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮನೋಜ ರಾಠೋಡ, ಡಿ.ಎಸ್.ಗುರಿಕಾರ, ಎಸ್.ಬಿ.ಕುಂಬಾರ, ಎ.ಎಸ್.ಬಾಬಾನಗರ, ಸಚಿನ ಗೌಡರ, ಆರ್.ಎಸ್.ಹೊಸೂರ, ಸಿ.ಬಿ.ಚವ್ಹಾಣ, ಕೆ.ಎಚ್.ನದಾಫ, ಎಸ್.ಎಂ.ಚವ್ಹಾಣ, ಕೆ.ಎಂ.ಅಲಗೂರ, ಹರ್ಷಿತಗೌಡ ಎಚ್., ಬಿ.ಕೆ.ನಂದಗಾವ, ಆರತಿ ಬಳವಾರ, ಎಂ.ಆರ್.ಇಬ್ರಾಹಿಂಪೂರ, ಅನುಪಮಾ ಪೂಜಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಹೋರಾಟಕ್ಕೆ ಕಂದಾಯ ನೌಕರರ ಸಂಘ, ಅಟಲ್‌ಜೀ ಜನಸ್ನೇಹಿ ಕೇಂದ್ರ, ಕರ್ನಾಟಕ ಪರವಾನಿಗೆ ಭೂಮಾಪಕರ ಸಂಘ ಬೆಂಬಲ ಸೂಚಿಸಿದವು.

ಸಾರ್ವಜನಿಕರ ಪರದಾಟ:

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು.ಜಾತಿ,ಆದಾಯ ಪ್ರಮಾಣಪತ್ರಗಳು, ಜನನ,ಮರಣ ಪ್ರಮಾಣಪತ್ರಗಳು ಸಕಾಲಕ್ಕೆ ದೊರೆಯದೇ ಸಾರ್ವಜನಿಕರು ತೊಂದರೆ ಅನುಭವಿಸಿದರು.

ಕೆಲವರು ಜಾತಿ, ಆದಾಯ ಪ್ರಮಾಣ ಪತ್ರಕ್ಕಾಗಿ ಗ್ರಾಮ ಆಡಳಿತ ಅಧಿಕಾರಿಗಳ ಸಹಿಗಾಗಿ ಹೋರಾಟ ಸ್ಥಳದಲ್ಲೇ ಕಾಯ್ದು ನಿಂತು ವಾಪಸ್ ಮರಳಿದ ಪ್ರಸಂಗಗಳು ಕಂಡು ಬಂದವು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ