Astrology Image of astrology

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಂಕಷ್ಟ ಕಟ್ಟಿಟ್ಟ ಬುತ್ತಿ

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಂಕಷ್ಟ ಕಟ್ಟಿಟ್ಟ ಬುತ್ತಿ

ಮೇಷ ರಾಶಿ: ಮನೆ ದೇವರ ದರ್ಶನ ಪಡೆಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.ಹಣಕಾಸಿನ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ,ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ.ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕನಸು ಈಡೇರಿಕೆಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ. ಉತ್ತಮ ಸಾಮಾಜಿಕ ಸಂಪರ್ಕ ಬೆಳೆಸಿಕೊಳ್ಳಿ. ಉದ್ವೇಗಕ್ಕೊಳಗಾಗದಿರಿ.ಅತಿಯಾದ ನಿರೀಕ್ಷೆಗಳು ಬೇಡ.ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು.
ಇಲ್ಲಿಯವರೆಗೆ ಅನವಶ್ಯಕವಾಗಿ
ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ
ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟಎಂಬುದು ಅರ್ಥವಾಗುತ್ತದೆ.
(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆವಹಿಸಿ.( ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ.
ಬೇಸರ ಬೇಡ. ಮುನ್ನಡೆಯಿರಿ.
(ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ನಿಮಗೆ ಸ್ವಲ್ಪ ಕಷ್ಟ ವಾಗಬಹುದು.(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಭಾವನಾತ್ಮಕ ಮಹತ್ವಾಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು.ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. ವೈಯಕ್ತಿಕ ಸಂಬಂಧಗಳು ಸೂಕ್ಷ್ಮ ಮತ್ತು ದುರ್ಬಲವಾಗಿರುತ್ತವೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆ ಗಳು ಉತ್ತಮವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿ ರುತ್ತದೆ.(ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಆರೋಗ್ಯ ದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹ ಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ದಶಮಿ
ನಕ್ಷತ್ರ : ಪುಷ್ಯ ನಕ್ಷತ್ರ.

ರಾಹುಕಾಲ:10:30AM ರಿಂದ 12:00PM
ಗುಳಿಕಕಾಲ:07:30AM ರಿಂದ 09:00AM
ಯಮಗಂಡಕಾಲ:03:00PM ರಿಂದ 04:30PM

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ