ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!



ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.

ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.

ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.

ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.

ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ