ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.
ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.
ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.
—
ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
Latest News
ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ
ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು
ಇಂದು ವಿಜಯಪುರ ನಗರಕ್ಕೆ ಸಿಎಂ, ಡಿಸಿಎಂ ಭೇಟಿ:
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ
ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ
ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್
ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ
ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ
ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್
ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್ಇ,ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ
ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ
ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.







