ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!



ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.

ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.

ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.

ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.

ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.