ವಿಶೇಷ ವರದಿ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.
ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ, ಸಹಾಯಕ ಚುನಾವಣಾಧಿಕಾರಿಗಳಾಗಲೀ ಚುನಾವಣಾ ಕೇಂದ್ರ ಸ್ಥಾಪಿಸಿರುವ ಕೊಠಡಿಯ ಬಳಿ ಯಾವುದೇ ಮಾಹಿತಿಯನ್ನು ಪ್ರಕಟಿಸದೇ ಇರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ ಮತಕ್ಷೇತ್ರ ಸಂಖ್ಯೆ 6 ರಿಂದ ಬಂದಗಿಪಟೇಲ್ ಇಬ್ರಾಹಿಂಪಟೇಲ್ ಗಣಿಯಾರ ಹಾಗೂ ಶಂಕರಗೌಡ ಬಸನಗೌಡ ಬಿರಾದಾರ ಶಿಕ್ಷಣ ಇಲಾಖೆಯಿಂದ ಕಣದಲ್ಲಿ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.
ನೌಕರರ ಸಂಘಕ್ಕೆ ಹಿಂದಿನ ಅಧ್ಯಕ್ಷರ ಸ್ಥಾನಕ್ಕೆ ಪ್ರಭಾವಿ ನೌಕರರನ್ನೇ ತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದಿದ್ದು ಇದಕ್ಕೆ ಒಪ್ಪದವರಿಗೆ ನಾನಾ ರೀತಿಯಲ್ಲಿ ಬೆದರಿಕೆಗಳು, ಒತ್ತಡಗಳನ್ನು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣಾಧಿಕಾರಿಯೂ ಆಗಿರುವ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ಕಟ್ಟಮನಿ ಅವರು, ಕಣದಲ್ಲಿ ಇಬ್ಬರೇ ಉಳಿದಿದ್ದು ಮತದಾನ ನಡೆಯಲಿದೆ ಎಂದು ತಿಳಿಸಿದರು.
ಆದರೆ ಅವಿರೋಧವಾಗಿ ಆಯ್ಕೆಯಾದವರು ಯಾರು ಎಂಬ ಮಾಹಿತಿ ನೀಡಲು ಹಿಂದೇಟು ಹಾಕಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.ಸ್ವತಃ ಅವಿರೋಧವಾಗಿ ಆಯ್ಕೆಯಾದವರಲ್ಲೇ ತಳಮಳ ಶುರುವಾಗಿದೆ.ಅಂತಿಮ ದಿನದಂದು ಯಾರು ಪದಾಧಿಕಾರಿಗಳನ್ನಾಗಿ ಘೋಷಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೆಲವು ಇಲಾಖೆಯ ನೌಕರರು ತಮ್ಮ ಆತಂಕ ಹೊರ ಹಾಕಿದ್ದಾರೆ.
—
ಅ.21 ರಂದೇ ಅಂತಿಮವಾಗಿ ಕಣದಲ್ಲಿ ಉಳಿದವರ ಪಟ್ಟಿ ಪ್ರಕಟಿಸಬೇಕಿತು.ಚುನಾವಣಾಧಿಕಾರಿಗಳು ಯಾರದ್ದೋ ಮರ್ಜಿಗೆ ಒಳಗಾಗಿ ಕೆಲಸ ಮಾಡುತ್ತಿದ್ದಾರೆ. ಭಾಗ -೧ ಭಾಗ 2 ಎಂದು ವಿಂಗಡಿಸಲಾಗಿದ್ದು ಅದರಲ್ಲಿ ಶಿಕ್ಷಣ ಇಲಾಖೆಯಿಂದ ಮೂವರು ಅವಿರೋಧ ಎನ್ನುತ್ತಿದ್ದಾರೆ.ಆದರೆ ಭಾಗ 2 ರಲ್ಲಿ ಇರುವವರು ಒಂದರಲ್ಲಿ ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ.ಆದರೆ ಈವರೆಗೂ ಪಟ್ಟಿ ಪ್ರಕಟಿಸಿಲ್ಲ. ತಾಲ್ಲೂಕಿನ ನೌಕರರಿಗೆ ಚುನಾವಣೆಯ ಕುರಿತು ಸರಿಯಾದ ಮಾಹಿತಿಯನ್ನೇ ನೀಡಲಾಗಿಲ್ಲ.ಎಲ್ಲವನ್ನೂ ಗುಪ್ತವಾಗಿ ಮಾಡುತ್ತಿರುವುದು ಯಾರನ್ನು ಮೆಚ್ಚಿಸಲು ಎಂಬುದು ತಿಳಿದಿಲ್ಲ ಎಂದು
ಚುನಾವಣೆಯಲ್ಲಿ ಕಣದಲ್ಲಿ ಉಳಿದಿರುವ ಬಂದಗಿಪಟೇಲ್ ಗಣಿಯಾರ ಆರೋಪಿಸಿದ್ದಾರೆ.
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!
Latest News
ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ
ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!
ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ
ಪ್ರೇರಣಾ ಕಿಂಡರ್ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ
ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ
ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ
ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ
ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ
ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್ ಜಾನ್ ಅಂಬ್ಯುಲೆನ್ಸ್ ತಾಲ್ಲೂಕು ಸೆಂಟರ್ ಸಹಯೋಗದಲ್ಲಿ ದಿ.ಕೂಡ್ಲಯ್ಯ ಶಿವಯೋಗಿಮಠ,ದಿ.ಬೋರಮ್ಮ ಶಿವಯೋಗಿಮಠ ಹಾಗೂ ದಿ.ಕೂಡಲಯ್ಯ ಶಿವಯೋಗಿಮಠ ಅವರ ಪುಣ್ಯಸ್ಮರಣೋತ್ಸವ ನಿಮಿತ್ಯ ಮಾ.2 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 2ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಫಕಿರೇಶ್ವರ ಡಯಗ್ನೋಸ್ಟಿಕ್ ಸೆಂಟರ್ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ , ಶಾಂತು ಶಿವಯೋಗಿಮಠ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ
ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ
ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು ಸಾಯಂಕಾಲ 4ಕ್ಕೆ ಎಸ್.ಎನ್.ಡಿ ಸಂಸ್ಕೃತಿ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಜಮಖಂಡಿ ಓಲೇಮಠದ ಆನಂದ ದೇವರು, ಕಾಳಗಿಯ ದೇವಿ ಆರಾಧಕ ಮಹಾದೇವಪ್ಪ ವಿಶ್ವಕರ್ಮ,ಈರಣ್ಣ ಬಡಿಗೇರ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸುವರು. ಚಡಚಣ ಸಿಪಿಐ







