ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಗೊಳಸಂಗಿ: ಇದು ಪ್ರಸ್ತುತ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸದ್ಯ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ರೈತರ ಹಾಗು ಯುವಕರ ಅಳಲು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ನಮ್ಮೂರಿಗೂ ಕೂಡ ನೀರಾವರಿ ಭಾಗ್ಯ ಬರುತ್ತದೆ ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ಇನ್ನೂ ದೊರೆಯದ ನೀರಾವರಿ ಭಾಗ್ಯ ಪಟ್ಟಣದಲ್ಲಿ ನಿರುದ್ಯೋಗವನ್ನು ಅನುಭವಿಸಿ ತಮ್ಮುರಿನತ್ತ ಬಂದು ವ್ಯವಸಾಯ ಕೃಷಿ ಮಾಡಬೇಕೆಂಬ ಹಂಬಲವಿರುವ ಅನೇಕ ಯುವಕರಲ್ಲಿ ನಮ್ಮೂರಿಗೆ ನೀರಾವರಿ ಭಾಗ್ಯ ಇಂದಲ್ಲ ನಾಳೆ ಲಭಿಸುವುದು ಎಂಬ ಆಶಾಭಾವನೆ ಇಟ್ಟುಕೊಂಡ ರೈತ ಯುವಕರ ಆಕ್ರೋಶದ ಕಟ್ಟೆ ಹೊಡೆಯುತ್ತಿದೆ.

ಜನಪ್ರತಿನಿಧಿಗಳ ಹಾಗೂ ಶಾಸಕರ ಮುತ್ತಿಗೆ ಹಾಕುವ ಕಾಲ ಇನ್ನೇನು ದೂರವಿಲ್ಲ ಎಂಬ ಭಾವನೆ ರೈತ ಹಾಗೂ ಯುವಕರಲ್ಲಿ ಮೂಡುತ್ತಿದೆ ಸುತ್ತಮುತ್ತಲ ಎಲ್ಲ ಗ್ರಾಮಗಳಿಗೂ ನೀರಾವರಿ ವ್ಯವಸ್ಥೆ ಆದರೂ ಕೂಡ ಅಂಗಡಗೇರಿ ಗ್ರಾಮದ ಪಾಲಿಗೆ ಇನ್ನೂ ಕನಸಾಗಿ ಉಳಿದ ನೀರಾವರಿ ವ್ಯವಸ್ಥೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿಯ ಭಾಗ್ಯ ಇದೆ ತೆಲಗಿ, ಮಟ್ಟಿಹಾಳ,ಚೀರಲದಿನ್ನಿ, ಕೂಡಗಿ,ಮಸೂತಿ,ಮಲಘಾನ, ಸಿದ್ದನಾಥ ಕವಲಗಿ, ಅರಷಣಗಿ, ಗಣಿ, ಚೀಮ್ಮಲಗಿ, ವಂದಾಲ, ಈಗಾಗಲೇ ನೀರಾವರಿಯ ಭೂಮಿಗಳಾಗಿದ್ದು ಜಾಕ್ವೇಲ್ ಮುಖಾಂತರ ನೀರಾವರಿಯ ಸೌಲಭ್ಯವನ್ನು ಏಕೆ ಒದಗಿಸಲಾಗುತಿಲ್ಲ…..?

‌ಕಾರಣ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೋ ಅಥವಾ ನಮ್ಮೂರಿನ ಅಂಗಡಗೇರಿ ಗ್ರಾಮದ ಯಾವ ಜನಪ್ರತಿನಿಧಿಗಳಿಗೂ ಅರವಿಗೆ ಬಂದಿಲ್ಲವೊ ಅಥವಾ ನಮ್ಮ ಊರು ಅತ್ಯಂತ ಎತ್ತರ ಪ್ರದೇಶದಲ್ಲಿದೆಯೊ ಅಥವಾ ಶಾಸಕರಿಗೆ ಇಚ್ಚಾಶಕ್ತಿಯ ಕೊರತೆಯೋ ಅಥವಾ ನಮ್ಮ ಊರಿನಿಂದ ಯಾರೊಬ್ಬರೂ ಮತದಾನ ಮಾಡಿಲ್ಲವೆಂದು ಸಂಶಯವಿದೆಯಾ….? ಎಂಬುವುದನ್ನೂ ಗ್ರಾಮದ ಜನ ಚರ್ಚಿಸುತ್ತಿದ್ದಾರೆ.

ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಿಗೂ ನೀರಾವರಿಯಾದರೂ ಕೂಡಾ ನಮ್ಮೂರಿಗೆ ಇನ್ನೂ ನೀರಾವರಿಯ ಸೌಲಭ್ಯ ದೊರಕುತ್ತಿಲ್ಲ.ನೀರಾವರಿ ಆದರೆ ರೈತರ ಬಾಳು ಹಸನಾಗುವುದು ಎಂಬ ಆಶಾಭಾವನೆಯೊಂದಿಗೆ ರೈತರು ಇನ್ನೂ ಕಾಲಕಳೆಯುತ್ತಿದ್ದಾರೆ. ಇನ್ನೂ ಆದಷ್ಟು ಬೇಗ ಸರ್ಕಾರ ಮತ್ತು ಶಾಸಕರು ನಮ್ಮೂರಿನತ್ತ ಕಣ್ಣಾಯಿಸಿ ರೈತರ ಗೊಳು ಆಲಿಸುವರೆಂದು ಅಂದುಕೊಂಡಿದ್ದೇವೆ.ಈ ತಾರತಮ್ಯವನ್ನು ಹೋಗಲಾಡಿಸಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡುವುದನ್ನು ಬಿಟ್ಟು ಬಸವನ ಬಾಗೇವಾಡಿ ಹಾಗೂ ನಿಡುಗುಂದಿ ತಾಲೂಕು ಸಂಪೂರ್ಣ ನೀರಾವರಿ ಗ್ರಾಮಗಳನ್ನಾಗಿ ಮಾಡಬೇಕು ನೀರು ಪ್ರತಿಯೊಂದು ಗ್ರಾಮಕ್ಕೂ ಅತಿ ಅವಶ್ಯಕ ಕೃಷಿ ಜನ ಜಾನುವಾರುಗಳಿಗೆ. ನೀರು ಒದಗಿಸಿ ಆದಷ್ಟು ಬೇಗ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಕಣ್ಣು ಹಾಯಿಸಿ ಶೀಘ್ರದಲ್ಲಿ ಅಂಗಡಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರಾವರಿ ಗೊಳಿಸಲು ಮತ್ತು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಶೀಘ್ರದಲ್ಲಿ ಮಾಡಬೇಕೆಂದು ರೈತರು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದಾರೆ.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ