ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಗೊಳಸಂಗಿ: ಇದು ಪ್ರಸ್ತುತ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸದ್ಯ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ರೈತರ ಹಾಗು ಯುವಕರ ಅಳಲು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ನಮ್ಮೂರಿಗೂ ಕೂಡ ನೀರಾವರಿ ಭಾಗ್ಯ ಬರುತ್ತದೆ ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ಇನ್ನೂ ದೊರೆಯದ ನೀರಾವರಿ ಭಾಗ್ಯ ಪಟ್ಟಣದಲ್ಲಿ ನಿರುದ್ಯೋಗವನ್ನು ಅನುಭವಿಸಿ ತಮ್ಮುರಿನತ್ತ ಬಂದು ವ್ಯವಸಾಯ ಕೃಷಿ ಮಾಡಬೇಕೆಂಬ ಹಂಬಲವಿರುವ ಅನೇಕ ಯುವಕರಲ್ಲಿ ನಮ್ಮೂರಿಗೆ ನೀರಾವರಿ ಭಾಗ್ಯ ಇಂದಲ್ಲ ನಾಳೆ ಲಭಿಸುವುದು ಎಂಬ ಆಶಾಭಾವನೆ ಇಟ್ಟುಕೊಂಡ ರೈತ ಯುವಕರ ಆಕ್ರೋಶದ ಕಟ್ಟೆ ಹೊಡೆಯುತ್ತಿದೆ.

ಜನಪ್ರತಿನಿಧಿಗಳ ಹಾಗೂ ಶಾಸಕರ ಮುತ್ತಿಗೆ ಹಾಕುವ ಕಾಲ ಇನ್ನೇನು ದೂರವಿಲ್ಲ ಎಂಬ ಭಾವನೆ ರೈತ ಹಾಗೂ ಯುವಕರಲ್ಲಿ ಮೂಡುತ್ತಿದೆ ಸುತ್ತಮುತ್ತಲ ಎಲ್ಲ ಗ್ರಾಮಗಳಿಗೂ ನೀರಾವರಿ ವ್ಯವಸ್ಥೆ ಆದರೂ ಕೂಡ ಅಂಗಡಗೇರಿ ಗ್ರಾಮದ ಪಾಲಿಗೆ ಇನ್ನೂ ಕನಸಾಗಿ ಉಳಿದ ನೀರಾವರಿ ವ್ಯವಸ್ಥೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿಯ ಭಾಗ್ಯ ಇದೆ ತೆಲಗಿ, ಮಟ್ಟಿಹಾಳ,ಚೀರಲದಿನ್ನಿ, ಕೂಡಗಿ,ಮಸೂತಿ,ಮಲಘಾನ, ಸಿದ್ದನಾಥ ಕವಲಗಿ, ಅರಷಣಗಿ, ಗಣಿ, ಚೀಮ್ಮಲಗಿ, ವಂದಾಲ, ಈಗಾಗಲೇ ನೀರಾವರಿಯ ಭೂಮಿಗಳಾಗಿದ್ದು ಜಾಕ್ವೇಲ್ ಮುಖಾಂತರ ನೀರಾವರಿಯ ಸೌಲಭ್ಯವನ್ನು ಏಕೆ ಒದಗಿಸಲಾಗುತಿಲ್ಲ…..?

‌ಕಾರಣ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೋ ಅಥವಾ ನಮ್ಮೂರಿನ ಅಂಗಡಗೇರಿ ಗ್ರಾಮದ ಯಾವ ಜನಪ್ರತಿನಿಧಿಗಳಿಗೂ ಅರವಿಗೆ ಬಂದಿಲ್ಲವೊ ಅಥವಾ ನಮ್ಮ ಊರು ಅತ್ಯಂತ ಎತ್ತರ ಪ್ರದೇಶದಲ್ಲಿದೆಯೊ ಅಥವಾ ಶಾಸಕರಿಗೆ ಇಚ್ಚಾಶಕ್ತಿಯ ಕೊರತೆಯೋ ಅಥವಾ ನಮ್ಮ ಊರಿನಿಂದ ಯಾರೊಬ್ಬರೂ ಮತದಾನ ಮಾಡಿಲ್ಲವೆಂದು ಸಂಶಯವಿದೆಯಾ….? ಎಂಬುವುದನ್ನೂ ಗ್ರಾಮದ ಜನ ಚರ್ಚಿಸುತ್ತಿದ್ದಾರೆ.

ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಿಗೂ ನೀರಾವರಿಯಾದರೂ ಕೂಡಾ ನಮ್ಮೂರಿಗೆ ಇನ್ನೂ ನೀರಾವರಿಯ ಸೌಲಭ್ಯ ದೊರಕುತ್ತಿಲ್ಲ.ನೀರಾವರಿ ಆದರೆ ರೈತರ ಬಾಳು ಹಸನಾಗುವುದು ಎಂಬ ಆಶಾಭಾವನೆಯೊಂದಿಗೆ ರೈತರು ಇನ್ನೂ ಕಾಲಕಳೆಯುತ್ತಿದ್ದಾರೆ. ಇನ್ನೂ ಆದಷ್ಟು ಬೇಗ ಸರ್ಕಾರ ಮತ್ತು ಶಾಸಕರು ನಮ್ಮೂರಿನತ್ತ ಕಣ್ಣಾಯಿಸಿ ರೈತರ ಗೊಳು ಆಲಿಸುವರೆಂದು ಅಂದುಕೊಂಡಿದ್ದೇವೆ.ಈ ತಾರತಮ್ಯವನ್ನು ಹೋಗಲಾಡಿಸಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡುವುದನ್ನು ಬಿಟ್ಟು ಬಸವನ ಬಾಗೇವಾಡಿ ಹಾಗೂ ನಿಡುಗುಂದಿ ತಾಲೂಕು ಸಂಪೂರ್ಣ ನೀರಾವರಿ ಗ್ರಾಮಗಳನ್ನಾಗಿ ಮಾಡಬೇಕು ನೀರು ಪ್ರತಿಯೊಂದು ಗ್ರಾಮಕ್ಕೂ ಅತಿ ಅವಶ್ಯಕ ಕೃಷಿ ಜನ ಜಾನುವಾರುಗಳಿಗೆ. ನೀರು ಒದಗಿಸಿ ಆದಷ್ಟು ಬೇಗ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಕಣ್ಣು ಹಾಯಿಸಿ ಶೀಘ್ರದಲ್ಲಿ ಅಂಗಡಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರಾವರಿ ಗೊಳಿಸಲು ಮತ್ತು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಶೀಘ್ರದಲ್ಲಿ ಮಾಡಬೇಕೆಂದು ರೈತರು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು