ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ



ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.


ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗಡಿಕಾರರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಎಲ್ಲ ಅಂಗಡಿಗಳ ಮೇಲಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು.ಹಸಿರು ಪಟಾಕಿ ಬಳಕೆಯ ಕುರಿತಂತೆ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಕರ್ನಾಟಕದಲ್ಲಿ ಜೀವನ ನಡೆಸುವ ನಾವೆಲ್ಲರೂ ಕನ್ನಡ ಭಾಷೆಯನ್ನು ಪ್ರೀತಿಸಬೇಕು.ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕಾಗಿದ್ದು ಕಡ್ಡಾಯವಾಗಿದ್ದು ಕನ್ನಡ ಭಾಷೆಯನ್ನು ಹೆಚ್ಚು ಪ್ರಮಾಣದಲ್ಲಿ ನಾಮಫಲಕಗಳಲ್ಲಿ ಬಳಸಬೇಕು ಎಂದು ಹೇಳಿದರು.


ಕನ್ನಡಪರ ಸಂಘಟನೆಯ ಮುಖಂಡರಾದ ರಾಜುಗೌಡ ತುಂಬಗಿ, ಮಂಜು ಕೊಪ್ಪ, ಪುಂಡಲೀಕ ಮುರಾಳ, ವೀರೇಶ ಗುರುಮಠ ಮಾತನಾಡಿ, ಕನ್ನಡ ರಾಜೋತ್ಸವದಂದು ಅಂಗಡಿಗಳ ಮೇಲೆ ಕನ್ನಡದ ಧ್ವಜ ಹಾರಿಸಿ ಅಭಿಮಾನ ತೋರಬೇಕು ಎಂದು ಒತ್ತಾಯಿಸಿದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಮುಖಂಡ ವಾಯ್.ಎಚ್.ವಿಜಯಕರ್, ವರ್ತಕ ಶರಣು ದೇಗಿನಾಳ, ವಿಕ್ರಂ ಓಸ್ವಾಲ್ ಮತ್ತಿತರರು ಮಾತನಾಡಿ , ಸರ್ಕಾರದ ಆದೇಶವನ್ನು ವ್ಯಾಪಾರಸ್ಥರು ಪಾಲಿಸಬೇಕು. ನಮ್ಮೂರಿನಲ್ಲಿ ಶೇ.70ರಷ್ಟು ಅಂಗಡಿಗಳ ನಾಮಫಲಕಗಳು ಕನ್ನಡದಲ್ಲಿಯೇ ಇದ್ದು ಇನ್ನುಳಿದವರು ಸರ್ಕಾರದ ಸುತ್ತೋಲೆಯಂತೆ ನಾಮಫಲಕಗಳನ್ನು ಅಳವಡಿಸಬೇಕು ಎಂದರು.

ಎಲ್ಲೆಂದರಲ್ಲಿ ಬಾಳೆಕಂಬ ,ಚೆಂಡು ಹೂವು ಮಾರುವಂತಿಲ್ಲ:
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ದೀಪಾವಳಿ ಸಮಯದಲ್ಲಿ ಬಾಳೇಕಂಬ, ಹೂವು ಮತ್ತಿತರ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಚ್ಚಿ ಮಾರುವಂತಿಲ್ಲ.ವಿಶೇಷವಾಗಿ ಬಸವೇಶ್ವರ ವೃತ್ತದ ಆಸುಪಾಸಿನಲ್ಲಿ ಬಾಳೆ ಕಂಬ ಮಾರಾಟ ಮಾಡುವಂತಿಲ್ಲ.ಅದಕ್ಕಾಗಿ ಪುರಸಭೆಯಿಂದ ಗುರುತಿಸುವ ಸ್ಥಳದಲ್ಲಿ ಮಾರಾಟ ಮಾಡಬೇಕು.ಕೆರೆ ಸಮೀಪದಲ್ಲಿರುವ ಖಾಸ್ಗತೇಶ್ವರ ಮಠದ ಖಾಲಿ ಜಾಗೆಯಲ್ಲಿ ಬಾಳೇ ಕಂಬ, ಹೂವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.ಸಭೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ ಸುಂಕದ, ಪುರಸಭೆ ಸದಸ್ಯ ರಫೀಕ ದ್ರಾಕ್ಷಿ,ವರ್ತಕರಾದ ನಿಂಗಣ್ಣ ಚಟ್ಟೇರ, ವಿ.ಕೆ.ದೇಶಪಾಂಡೆ, ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ,ರಾಜಶೇಖರ ಹೊಳಿ ಮೊದಲಾದವರು ಇದ್ದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ