ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳ : ವಿಜಯದಶಮಿ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಕರ್ಷಕ ಪಥಸಂಚಲನದಲ್ಲಿ ಸಾಂಘಿಕ ಶಕ್ತಿ ಅನಾವರಣಗೊಂಡಿತು‌.

ನಗರದ ಹುಡ್ಕೋ ಬಡಾವಣೆ ಬಳಿ ಇರುವ ಗವಿಸಿದ್ದೇಶ್ವರ ಕ್ರೀಡಾ ಮೈದಾನ ದಿಂದ ಪ್ರಾರಂಭಗೊಂಡ ಭವ್ಯ ಪಥಸಂಚಲನ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಮೂಲಕ ಸ್ಟೇಟ್ ಬ್ಯಾಂಕ ಮುಖ್ಯ ರಸ್ತೆ, ಕೆ.ಎಸ್.ಆರ್.ಟಿ.ಸಿ ಮುಖ್ಯ ರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಸಂತ ಕನಕದಾಸ ವೃತ್ತ, ವಾಲ್ಮೀಕಿ ವೃತ್ತ, ಶಾರದಾ ದೇವಸ್ಥಾನ, ಲಕ್ಷ್ಮೀ ವೆಂಕಟೇಶ್ವರ ಗುಡಿ, ಛತ್ರಪತಿ ಶಿವಾಜಿ ವೃತ್ತ, ಸಿದ್ರಾಮೇಶ್ವರ ವೃತ್ತ, ನೇತಾಜಿ ಗಲ್ಲಿ, ಕುಂಬಾರಗಲ್ಲಿ, ದ್ಯಾಮವ್ವನ ಗುಡಿ, ಕಿಲ್ಲಾ ಹೊಸಮಠದ ಮುಖಾಂತರ ಸರಾಫ ಬಜಾರ, ಶ್ರೀದುರ್ಗಾದೇವಿ ಗುಡಿ(ದ್ಯಾಮವ್ವನ ಕಟ್ಟಿ), ಮುಖ್ಯ ಬಜಾರ, ಮಾರ್ಗವಾಗಿ ಬಸವೇಶ್ವರ ವೃತ್ತ ತಲುಪಿ ಸಂಗೋಳ್ಳಿ ರಾಯಣ್ಣ ವೃತ್ತ, ಡಾ ಬಿ ಆರ್ ಅಂಬೇಡ್ಕರ ವೃತ್ತದಿಂದ ಹಾಯ್ದು ಕಾರ್ಯಕ್ರಮದ ಸ್ಥಳ ವ್ಹಿ.ಬಿ.ಸಿ ಪ್ರೌಢಶಾಲೆಯ ಆವರಣಕ್ಕೆ ಆಗಮಿಸಿತು.


ಪಥಸಂಚಲನದ ಮಾರ್ಗದಲ್ಲಿ ಮಹಿಳೆಯರು ರಂಗೋಲಿ , ಹೂವುಗಳಿಂದ ರಸ್ತೆಯನ್ನು ಅಲಂಕರಿಸಿದ್ದರು.ಭಾರತದ ಮಹಾನ ಪುರುಷರ ವೇಷಧಾರಿಗಳು ಗಣವೇಷಧಾರಿಗಳ ಮೇಲೆ ಪುಷ್ಪವೃಷ್ಟಿಗೈದರು.
ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್ ಸಂಜಯ ತಿಪರಡ್ಡಿ ಸೇರಿದಂತೆ ನೂರಾರು ಪೊಲೀಸರು ಭದ್ರತೆ ಉಸ್ತುವಾರಿ ವಹಿಸಿದ್ದರು.
ಆರ್.ಎಸ್.ಎಸ್.ಸಂಸ್ಥಾಪಕರ ಹೆಗಡೇವಾರ ಹಾಗೂ ಗೊಲ್ವಾಲ್ಕರ್ ಮತ್ತು ಭಾರತಮಾತೆಯ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ