ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ