ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್‌ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಕೆಬಿಜೆಎನ್‌ಎಲ್ ಎಎಲ್‌ಬಿಸಿ ವಿಭಾಗ-3 ಕಚೇರಿಗೆ ಆಗಮಿಸಿದ್ದ ರೈತರು,

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ