ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ