ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.


ಆರ್.ಎಸ್.ಎಸ್ ಮುಸಲ್ಮಾನರ ವಿರೋಧಿ ಎಂದು ಬಿಂಬಿಸಲಾಗುತ್ತದೆ.ಆದರೆ ಸಂಘದಲ್ಲಿ ಬಂದರ‍್ಯಾರು ಅದನ್ನು ಒಪ್ಪಿಲ್ಲ.ಸಂಘದಲ್ಲೂ ಮುಸ್ಲಿಂ ಬಾಂಧವರು ಇದ್ದಾರೆ. ದೇಶವನ್ನು ಮಾತೃಭೂಮಿ, ತಾಯಿ ಎಂದು ಭಾವಿಸಿದವರು, ಭಾರತ ಮಾತಾಕೀ ಜೈ ಎಂದು ಹೇಳುವವರು ಅವರೆಲ್ಲರೂ ಹಿಂದೂಗಳು.ಪೂಜಾ ಪದ್ಧತಿ, ಧರ್ಮ,ಆಚರಣೆಗಳು ಏನೇ ಇದ್ದರೂ ಅವರು ಹಿಂದೂಗಳೇ ಆಗಿದ್ದಾರೆ.ಇಂಡೋನೇಷ್ಯಾದಲ್ಲಿ ಶೇ.95ರಷ್ಟು ಮುಸ್ಲಿಂರಿದ್ದರೂ ಅಲ್ಲಿನ ಏರಲೈನ್ ಹೆಸರು ಗರುಡಾ ಏರಲೈನ್ಸ್ ಎಂದು ಇರಿಸಲಾಗಿದೆ.ಏರಪೋರ್ಟ್ನಲ್ಲಿ ರಾಮಾಯಣದ ದೃಶ್ಯಗಳನ್ನು ಅಳವಡಿಸಲಾಗಿದೆ.ಹಿಂದೂ ಮಂದಿರಗಳ ಮೇಲೆ, ಹಿಂದೂ ಸಮಾಜದ ಮೇಲೆ ಸಮಸ್ಯೆ ಆದಾಗ ಆರ್.ಎಸ್.ಎಸ್ ಅಲ್ಲಿರುತ್ತದೆ ಎಂದರು.


ಶಿವಾಜಿ ಮಹಾರಾಜರಂತಹ ವ್ಯಕ್ತಿ ಹಿಂದವೀ ಸಮಾಜ ಕಟ್ಟಿದ್ದರಿಂದ ಹಿಂದೂಗಳು ಉಳಿದಿದ್ದೇವೆ. ಸಂಘ ಆಸ್ಪತ್ರೆ, ರಕ್ತನಿಧಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಸಮಾಜದಲ್ಲಿ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. 1990ರ ನಂತರ ಹಿಂದುತ್ವಕ್ಕೆ ದೇಶದಲ್ಲಿ ಜಗತ್ತಿನಲ್ಲಿ ಮಾನ್ಯತೆ ದೊರೆಯುತ್ತಿದೆ.ಹಿಂದೆ ನಾವೆಲ್ಲ ಹಿಂದೂ ಎಂದು ಹೇಳಿಕೊಳ್ಳುತ್ತಿರಲಿಲ್ಲ.ಈಗ ನಾವು ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಎಂದು ಹೇಳಿಕೊಳ್ಳುವಂತಾಗಿದೆ. ಜಗತ್ತಿನ ವಿವಿಧ ರಾಷ್ಟçಗಳಲ್ಲಿ ಐದು ಕೋಟಿ ಜನ ಹಿಂದೂಗಳಿದ್ದು ಅವರನ್ನು ಒಗ್ಗೂಡಿಸಿ ಶಕ್ತಿ ತುಂಬ ಕೆಲಸ ಆರ್.ಎಸ್.ಎಸ್ ಮಾಡುತ್ತಿದೆ.ಈಗಾಗಲೇ 52 ದೇಶಗಳಲ್ಲಿ ಸಂಘದ ಕೆಲಸ ನಡೆಯುತ್ತಿದೆ ಎಂದರು.

ಗಣ್ಯ ವರ್ತಕ ಬಿ.ಸಿ.ಮೋಟಗಿ ವೇದಿಕೆಯಲ್ಲಿದ್ದರು.ವಿನೋದ ಮಡಿವಾಳರ ಪ್ರಾರ್ಥನಾ ಗೀತೆ ಹಾಡಿದರು.ಗಿರೀಶ ದೇಶಪಾಂಡೆ ಸ್ವಾಗತಿಸಿದರು. ಪ್ರಭು ನಂದೆಪ್ಪನವರ ಹಾಗೂ ರಾಘವೇಂದ್ರ ಕುಲಕರ್ಣಿ ನಿರೂಪಿಸಿದರು.ಚೇತನ ಮಾಗನೂರ ವಂದಿಸಿದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ