ಮುದ್ದೇಬಿಹಾಳ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಯಲು (Otoscope) ಓಟೋಸ್ಕೋಪ್ ಮೂಲಕ (ಟಾರ್ಚ್ ಹಾಕಿ) ಅಭ್ಯರ್ಥಿಗಳ ಶ್ರವಣೇಂದ್ರಿಯಗಳನ್ನು ಕೂಲಂಕಷವಾಗಿ ಪರೀಕ್ಷಿಸಲಾಯಿತು.
ಮುದ್ದೇಬಿಹಾಳದ ಅಭ್ಯುದಯ, ಎಸ್.ಎಸ್.ಶಿವಾಚಾರ್ಯ, ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಕಾಲೇಜು, ನಾಗರಬೆಟ್ಟದ ಎಕ್ಸಪರ್ಟ್ ಸೈನ್ಸ್ ಕಾಲೇಜು, ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನಾಗರಬೆಟ್ಟದ ಪಿಯು ಸೈನ್ಸ್ ಕಾಲೇಜು, ಎಂ.ಜಿ.ಎಂ.ಕೆ, ಜ್ಞಾನಭಾರತಿ, ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ನಡೆಸಲಾಯಿತು.
ಯಾವುದೇ ವಿದ್ಯುನ್ಮಾನ ಯಂತ್ರಗಳಾದ ಬ್ಲೂಟೂತ್ ಹಾಗೂ ಇಯರ್-ಫೋನ್ಗಳನ್ನು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಲು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ತಜ್ಞ ವೈದ್ಯರು, ಶ್ರವಣಶಾಸ್ತ್ರಜ್ಞರು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಿದರು.
ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ಸತೀಶ ತಿವಾರಿ , ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ, ಪಿಎಸ್ ಐ ಸಂಜಯ ತಿಪರಡ್ಡಿ ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಯದಂತೆ ನೋಡಿಕೊಂಡರು.
ಒಟ್ಟು 3532 ಅಭ್ಯರ್ಥಿಗಳು ಮುದ್ದೇಬಿಹಾಳದಲ್ಲಿ ಪರೀಕ್ಷೆ ಬರೆದರು ಎಂದು ಸರ್ಕಾರ. ಪಪೂ ಕಾಲೇಜು ಪ್ರಾಚಾರ್ಯ ಎಸ್.ಎಸ್.ಅಂಗಡಿ ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..
Latest News
ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ
ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು
ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು
ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ
ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ
ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.
ಡಿಸೇಲ್,ಪೆಟ್ರೋಲ್ಗಾಗಿ ಪರದಾಟ: ಖಾಲಿ ಕ್ಯಾನ್ಗಳೊಂದಿಗೆ ಬಂಕ್ಗಳ ಮುಂದೆ ಸಾಲುದ್ದ ಕ್ಯೂ
ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್ಗಾಗಿ ಗ್ರಾಹಕರು
4 ತಿಂಗಳ ಗರ್ಭಿಣಿ ಆತ್ಮಹತ್ಯೆ..!
ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ
ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







