ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತುಂಬಗಿ ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಶಂಕರಗೌಡ ಬಿರಾದಾರ ಆಯ್ಕೆಯಾಗಿದ್ದಾರೆ.

ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.431 ಒಟ್ಟು ಮತದಾರರಲ್ಲಿ 395 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಅದರಲ್ಲಿ ಶಂಕರಗೌಡ ಬಿರಾದಾರಗೆ 217 , ಬಂದಗಿಪಟೇಲ್ ಗಣಿಯಾರ ಅವರಿಗೆ 173 ಮತಗಳು ದೊರೆತವು. ಐದು ಮತಗಳು ಅಸಿಂಧುಗೊಂಡವು. ಶಂಕರಗೌಡ ಬಿರಾದಾರ ಅವರು 44 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ, ಎಆರ್‌ಒ ಬಿ.ಎಚ್.ಹೂಗಾರ ಮಾಹಿತಿ ನೀಡಿದರು.
ಸಹಾಯಕರಾಗಿ ಮಹಾಂತೇಶ ಮಾಗಿ, ಆರ್.ಎಸ್.ಹೊಸೂರ,ರಿಯಾಜ ನಾಯ್ಕೋಡಿ, ಮುತ್ತಣ್ಣ ವಾಲೀಕಾರ ಕಾರ್ಯನಿರ್ವಹಿಸಿದರು.

ವಿಜೇತ ಅಭ್ಯರ್ಥಿಗೆ ಜಿ.ಒ.ಸಿ.ಸಿ ಬ್ಯಾಂಕ್ ನಿರ್ದೇಶಕ ಅರವಿಂದ ಹೂಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ,ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ತಾಲ್ಲೂಕು ಅಧ್ಯಕ್ಷ ಮನೋಜ ರಾಠೋಡ, ವೆಂಕಟೇಶ ಅಂಬಿಗೇರ, ಎನ್.ಎಸ್.ತುರುಡಗಿ,ಬಿ.ಎಸ್.ಹೊಳಿ,ಎಂ.ಎನ್.ಪಾಟೀಲ್ ಅಭಿನಂದಿಸಿದರು.

ವಿಜಯೋತ್ಸವ: ಅವಿರೋಧ ಆಯ್ಕೆಗೆ ಸಾಕಷ್ಟು ಪ್ರಯತ್ನ ಪಟ್ಟರೂ ಒಂದು ಸ್ಥಾನಕ್ಕೆ ಚುನಾವಣೆ ನಡೆಸುವುದು ಅನಿವಾರ್ಯವಾಯಿತು.ಶಾಂತಿಯುತವಾಗಿ ಚುನಾವಣೆ ನಡೆಸಲಾಗಿದ್ದು ನಮ್ಮ ಪೆನಲ್ ಅಭ್ಯರ್ಥಿ ಶಂಕರಗೌಡ ಬಿರಾದಾರ ಆಯ್ಕೆಯಾಗಿರುವುದು ಖುಷಿ ತಂದಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಳಿಕೋಟಿ ಘಟಕದ ಅಧ್ಯಕ್ಷ ಬಿ.ಟಿ.ವಜ್ಜಲ ತಿಳಿಸಿದರು.ಈ ಸಂದರ್ಭದಲ್ಲಿ ಬೆಂಬಲಿಗರಾದ ಸುರೇಶ ಬೀರಗೊಂಡ, ಸುರೇಶ ವಾಲೀಕಾರ, ರಮೇಶ ಹಿಪ್ಪರಗಿ,ಬಿ.ಎಸ್.ಶೇಖಣ್ಣವರ, ಶ್ರೀಕಾಂತ ಪವಾರ ಇದ್ದರು.ಎಎಸ್‌ಐ ಬಿ.ಡಿ.ಪವಾರ ಭದ್ರತೆ ಒದಗಿಸಿದ್ದರು.


Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ