ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ