ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600