ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು.


ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದರು.ಅಲ್ಲಿಂದ ತಹಶೀಲ್ದಾರ್ ಕಚೇರಿಗೆ ತಮಟೆ ಬಾರಿಸುತ್ತಾ ಮೆರವಣಿಗೆಯಲ್ಲಿ ಸಾಗಿದರು.


ಮುಖಂಡ ಹರೀಶ ನಾಟೀಕಾರ , ಒಳಮೀಸಲಾತಿ ಐಕ್ಯತೆ ಸಮೀತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳ ವಿವೇಚನೆಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸುವ ಅಧಿಕಾರ ಇದೆ ಎಂಬ ತೀರ್ಪು ಕೊಟ್ಟಿದ್ದರೂ ಈವರೆಗೂ ಒಳಮೀಸಲಾತಿ ಜಾರಿಗೊಳಿಸುವುದಕ್ಕೆ ಸಿಎಂ ಸಿದ್ಧರಾಮಯ್ಯನವರು ಕಾಲಹರಣ ಮಾಡುತ್ತಿದ್ದಾರೆ.ಪರಿಶಿಷ್ಟ ಸಮುದಾಯಗಳಿಂದ ಮಂತ್ರಿ, ಶಾಸಕರಾದವರು ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುತ್ತಿಲ್ಲ.ಎಲ್ಲಿ ಧ್ವನಿ ಎತ್ತಿದರೆ ತಮ್ಮ ಹೆಂಡತಿ,ಮಕ್ಕಳಿಗೆ ರಾಜಕೀಯ ಭವಿಷ್ಯ ಸಿಗುವುದಿಲ್ಲವೋ ಎಂದು ಬಾಯಿಮುಚ್ಚಿಕೊಂಡಿದ್ದು ಮುಂಬರುವ ದಿನಗಳಲ್ಲಿ ಅಂಥವರ ವಿರುದ್ಧವೇ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ವಕೀಲ ಕೆ.ಬಿ.ದೊಡಮನಿ ಮಾತನಾಡಿ,ಪರಿಶಿಷ್ಟ ಜಾತಿಯವರ ಮತಗಳನ್ನು ಪಡೆದುಕೊಂಡು ಶಾಸಕರಾಗಿರುವ ಸಿ.ಎಸ್.ನಾಡಗೌಡರು ಈವರೆಗೂ ಒಳಮೀಸಲಾತಿ ಬಗ್ಗೆ ಮಾತನಾಡಿಲ್ಲ.ಸರ್ಕಾರಕ್ಕೆ ಒತ್ತಡ ಹೇರುವ ಕೆಲಸ ನಾಡಗೌಡರಿಂದಾಗಬೇಕು ಎಂದು ಒತ್ತಾಯಿಸಿದರು.ಕೇವಲ ನಾಡಗೌಡರಷ್ಟೇ ಅಲ್ಲ ರಾಜ್ಯ 224 ಶಾಸಕರೂ ಒಳಮೀಸಲಾತಿ ಸೌಲಭ್ಯದ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗದ ಕೋಡಿಹಳ್ಳಿ ಸ್ವಾಮೀಜಿ ಮಾತನಾಡಿದರು.


ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಹೋರಾಟಗಾರರಾದ ಡಿ.ಬಿ.ಮುದೂರ, ಚೆನ್ನಪ್ಪ ವಿಜಯಕರ್, ಪ್ರಕಾಶ ಚಲವಾದಿ,ನಿಡಗುಂದಿಯ ಹೋರಾಟಗಾರ ತಿಪ್ಪಣ್ಣ ವಂದಾಲ,ಬಲಭೀಮ ನಾಯ್ಕಮಕ್ಕಳ, ಬಾಲಚಂದ್ರ ಹುಲ್ಲೂರ ಮೊದಲಾದವರು ಮಾತನಾಡಿದರು.
ಪ್ರಮುಖರಾದ ಬಸವರಾಜ ಪೂಜಾರಿ, ಯಮನಪ್ಪ ಹಂಗರಗಿ, ವಕೀಲ ಎಸ್.ಎಚ್.ಲೊಟಗೇರಿ, ಮೌನೇಶ ಮಾದರ, ಮಾರುತಿ ಸಿದ್ದಾಪೂರ, ದೇವರಾಜ ಹಂಗರಗಿ, ರವಿ ಬಸರಕೋಡ ಮೊದಲಾದವರು ಪಾಲ್ಗೊಂಡಿದ್ದರು.
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಉಸ್ತುವಾರಿ ವಹಿಸಿದ್ದರು.

Latest News

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ