ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ನಾಯಿ ಸತ್ತು ಬಿದ್ದಿರುವ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ಅದೇ ನೀರನ್ನು ಸೇವನೆ ಮಾಡಿದ್ದಾರೆ.ಇದರಿಂದ 8-10 ಜನರಿಗೆ ವಾಂತಿ ಬೇಧಿ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ವಾಲ್ ನಲ್ಲಿ ನಾಯಿ ಸತ್ತು ಬಿದ್ದಿದೆ.ಇದನ್ನು ಗಮನಿಸದೇ ವಾಟರ್ ಮನ್, ಪಂಚಾಯಿತಿ ಅಧಿಕಾರಿಗಳು ನೀರು ಪೂರೈಸಿದ್ದಾರೆ.ಇದರಿಂದ ಗ್ರಾಮದಲ್ಲಿ ಈ ನೀರು ಕುಡಿದಿರುವ ಹಲವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಆದರೆ ಸಂಬಂಧಿಸಿದ ಗ್ರಾಪಂ ಪಿಡಿಒ, ಅಧ್ಯಕ್ಷರು, ವಾಟರಮನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಅಯ್ಯಪ್ಪ ಇಚಲಾಳ, ಆನಂದ ಮಂಗ್ಯಾಳ, ಸಂಗಣ್ಣ ನಾಗಾವಿ, ಬಸನಗೌಡ ಬಿರಾದಾರ, ಬಸವರಾಜ ಮಂಗ್ಯಾಳ ದೂರಿದ್ದಾರೆ.
ಈ ಕಲುಷಿತ ನೀರು ಕುಡಿದ ಗ್ರಾಮಸ್ಥರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಪಂಚಾಯಿತಿ ಅಧ್ಯಕ್ಷ,ಪಿಡಿಒ,ವಾಟರಮನ್ ಹೊಣೆಗಾರಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲಪ್ಪ ಹಿರೇಕುರಬರ, ಪ್ರಭು ನಾಗಾವಿ, ಶ್ರೀಕಾಂತ ಗಬಸಾವಳಗಿ, ಸಿದ್ದಲಿಂಗಯ್ಯ ನಿಡಗುಂದಿಮಠ , ಯಲ್ಲಪ್ಪ ಸರೂರ, ಶ್ರೀಶೈಲ್ ಬಿರಾದಾರ, ದೇಸು ಮಾಲಗತ್ತಿ, ಚೆನ್ನಪ್ಪ ಹಾದಿಮನಿ, ಚಂದ್ರಶೇಖರ ತಳವಾರ ಆಗ್ರಹಿಸಿದ್ದಾರೆ.

ಕೊಳೆತ ನಾಯಿಯ ಕಳೆಬರ ಪತ್ತೆಯಾಗಿದ್ದರೂ ಸಂಬಂಧಿಸಿದ ಪಂಚಾಯಿತಿ ನೀರು ಪೂರೈಕೆ ಸಿಬ್ಬಂದಿ ಗಮನಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ