ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ನಾಯಿ ಸತ್ತು ಬಿದ್ದಿರುವ ಅನುಮಾನ ವ್ಯಕ್ತಪಡಿಸಿರುವ ಗ್ರಾಮಸ್ಥರು ಅದೇ ನೀರನ್ನು ಸೇವನೆ ಮಾಡಿದ್ದಾರೆ.ಇದರಿಂದ 8-10 ಜನರಿಗೆ ವಾಂತಿ ಬೇಧಿ ಆಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ವಾಲ್ ನಲ್ಲಿ ನಾಯಿ ಸತ್ತು ಬಿದ್ದಿದೆ.ಇದನ್ನು ಗಮನಿಸದೇ ವಾಟರ್ ಮನ್, ಪಂಚಾಯಿತಿ ಅಧಿಕಾರಿಗಳು ನೀರು ಪೂರೈಸಿದ್ದಾರೆ.ಇದರಿಂದ ಗ್ರಾಮದಲ್ಲಿ ಈ ನೀರು ಕುಡಿದಿರುವ ಹಲವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಆದರೆ ಸಂಬಂಧಿಸಿದ ಗ್ರಾಪಂ ಪಿಡಿಒ, ಅಧ್ಯಕ್ಷರು, ವಾಟರಮನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರಾದ ಅಯ್ಯಪ್ಪ ಇಚಲಾಳ, ಆನಂದ ಮಂಗ್ಯಾಳ, ಸಂಗಣ್ಣ ನಾಗಾವಿ, ಬಸನಗೌಡ ಬಿರಾದಾರ, ಬಸವರಾಜ ಮಂಗ್ಯಾಳ ದೂರಿದ್ದಾರೆ.
ಈ ಕಲುಷಿತ ನೀರು ಕುಡಿದ ಗ್ರಾಮಸ್ಥರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಪಂಚಾಯಿತಿ ಅಧ್ಯಕ್ಷ,ಪಿಡಿಒ,ವಾಟರಮನ್ ಹೊಣೆಗಾರಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲಪ್ಪ ಹಿರೇಕುರಬರ, ಪ್ರಭು ನಾಗಾವಿ, ಶ್ರೀಕಾಂತ ಗಬಸಾವಳಗಿ, ಸಿದ್ದಲಿಂಗಯ್ಯ ನಿಡಗುಂದಿಮಠ , ಯಲ್ಲಪ್ಪ ಸರೂರ, ಶ್ರೀಶೈಲ್ ಬಿರಾದಾರ, ದೇಸು ಮಾಲಗತ್ತಿ, ಚೆನ್ನಪ್ಪ ಹಾದಿಮನಿ, ಚಂದ್ರಶೇಖರ ತಳವಾರ ಆಗ್ರಹಿಸಿದ್ದಾರೆ.

ಕೊಳೆತ ನಾಯಿಯ ಕಳೆಬರ ಪತ್ತೆಯಾಗಿದ್ದರೂ ಸಂಬಂಧಿಸಿದ ಪಂಚಾಯಿತಿ ನೀರು ಪೂರೈಕೆ ಸಿಬ್ಬಂದಿ ಗಮನಿಸದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ