ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ವೊಂದರ ಚೇಂಬರ್‌ನಲ್ಲಿ ಸತ್ತ ನಾಯಿ ಕಳೆಬರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಗುರುವಾರ ಸಂಜೆ ಹಾಗೂ ಶುಕ್ರವಾರ ದೌಡಾಯಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಪಿಡಿ ಸೇವೆ ಆರಂಭಿಸಲಾಗಿದ್ದು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಜಮ್ಮಲದಿನ್ನಿ ಗ್ರಾಮಕ್ಕೆ ನೀರು ಪೂರೈಕೆ ವಾಲ್ವ್ದ ಚೇಂಬರ್‌ನಲ್ಲಿ ನಾಯಿ ಸತ್ತು ಬಿದ್ದಿರುವುದರಿಂದ ನೀರು ವಿಷಮಯವಾಗಿರುತ್ತದೆ.ಅದನ್ನು ಸೇವನೆ ಮಾಡಿದರೆ ತೀವ್ರ ಗಂಭೀರ ಪರಿಣಾಮಗಳು ಉಂಟಾಗುತ್ತವೆ.ಸದ್ಯಕ್ಕೆ ಗ್ರಾಮದಲ್ಲಿ ಸಂಚರಿಸಿ ಮನೆ ಮನೆಗೆ ಸಮೀಕ್ಷೆ ನಡೆಸಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ ಈ ವಾಲ್ವ್ನಿಂದ ಪೂರೈಕೆಯಾಗಿರುವ ನೀರನ್ನು ಪರೀಕ್ಷೆಗೆಂದು ಲ್ಯಾಬ್‌ಗೆ ಕಳಿಸಿಕೊಡಲಾಗುವುದು. ನೀರು ಪೂರೈಕೆ ಮಾಡಬೇಕಾದರೆ ಪಂಚಾಯಿತಿಯವರು ಪೈಪ್‌ಲೈನ್ ಶುಚಿತ್ವಗೊಳಿಸಿ ಪೂರೈಕೆಗೆ ಕ್ರಮ ಜರುಗಿಸಿ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ತಾಪಂ ಇಒ,ಆರ್‌ಡಬ್ಲೂö್ಯಎಸ್ ಎಇಇ ಭೇಟಿ: ವಾಲ್ವ್ನಲ್ಲಿ ನಾಯಿ ಸತ್ತು ಬಿದ್ದಿರುವ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತಾಪಂ ಇಒ ನಿಂಗಪ್ಪ ಮಸಳಿ, ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಎಇಇ ಆರ್.ಎಸ್.ಹಿರೇಗೌಡ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮಸ್ಥರ ತರಾಟೆ:

ಕುಡಿವ ನೀರು ಪೂರೈಕೆಯಲ್ಲಿ ದಿವ್ಯ ನಿರ್ಲಕ್ಷö್ಯ ವಹಿಸಿರುವ ಇಂಗಳಗೇರಿ ಪಂಚಾಯಿತಿ ಪಿಡಿಒ ವಿಜಯಮಹಾಂತೇಶ ಕೋರಿ, ಕಾರ್ಯದರ್ಶಿ ಬಸನಗೌಡ ಬಿರಾದಾರ ಅವರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು.ವಾಲ್ವ್ದಲ್ಲಿ ಸತ್ತ ನಾಯಿ ಬಿದ್ದಿರುವುದನ್ನು ಗಮನಿಸದಂತೆ ನಿಮ್ಮ ಪಂಚಾಯಿತಿ ವಾಲ್ವ್ಮನಗಳು ಕೆಲಸ ಮಾಡುತ್ತಾರೆ ಎಂದರೆ ಕಲುಷಿತ ನೀರು ಕುಡಿದ ಗ್ರಾಮಸ್ಥರ ಆರೋಗ್ಯದಲ್ಲಿ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು.

ಇಂಗಳಗೇರಿ ಗ್ರಾಪಂನಿAದ ಸತ್ತು ಬಿದ್ದಿದ್ದ ನಾಯಿಯ ಕಳೆಬರವನ್ನು ವಿಲೇವಾರಿ ಮಾಡಿ ಅಲ್ಲಿ ರೋಗ ನಿರೋಧಕ ಪೌಡರ್‌ನ್ನು ಸಿಂಪಡಣೆ ಮಾಡಲಾಗಿದೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ