ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ