ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ ಶಾಲಾ ಆವರಣದಲ್ಲಿ ನಿಂತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ, ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಇಲ್ಲಿನ ಮುಖ್ಯಶಿಕ್ಷಕರು,ಸಹ ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ.ನಾಡ ಹಬ್ಬ ಇದ್ದರೂ ನಾಡಧ್ವಜವನ್ನು ಆರೋಹಣ ಮಾಡದೇ ಮುಖ್ಯಶಿಕ್ಷಕರು ನಿರ್ಲಕ್ಷ್ಯ ಹಿಸಿದ್ದಾರೆ.ಕೇಳಿದರೆ ನಮ್ಮಲ್ಲಿ ಧ್ವಜಸ್ತಂಭ ಪ್ರತ್ಯೇಕವಾದದ್ದು ಇರಲಿಲ್ಲ ಅದಕ್ಕೆ ಆರೋಹಣ ಮಾಡಿಲ್ಲ ಎಂದು ಬೇಜವಾಬ್ದಾರಿತನದ ಉತ್ತರ ನೀಡಿದ್ದಾರೆ.ನಮಗೆ ಹೇಳಿದ್ದರೆ ಪಂಚಾಯಿತಿಯಿಂದ ಧ್ವಜಸ್ತಂಭ ಕೂಡಿಸುತ್ತಿದ್ದೇವು ಎಂದು ಆರೋಪಿಸಿದರು.

ಗ್ರಾಮದ ಮುಖಂಡರಾದ ನಿಂಗನಗೌಡ ಬಿರಾದಾರ, ಜುಮ್ಮಣ್ಣ ಚಲವಾದಿ, ಮಂಜು ನಾವದಗಿ,ದ್ಯಾಮಣ್ಣ ಗುಡದಿನ್ನಿ, ಬಸ್ಸು ಹುಲಗಬಾಳ, ಮಲ್ಲು ಹೆಬ್ಬಾಳ, ಅಲ್ಲಾಸಾ ಮುದ್ನಾಳ,ಅಡಿಯಪ್ಪ ಮದರಿ, ಸಿದ್ದು ಹೆಬ್ಬಾಳ, ಶಿವು ಶಿರೋಳಕರ , ಹಣಮಂತ ಮಾದರ, ಜಟ್ಟೆಪ್ಪ ನೇಬಗೇರಿ, ಶೇಖಪ್ಪ ಹುಲಗಬಾಳ, ಶಾಂತು ಬಿರಾದಾರ ಮೊದಲಾದವರು ಇದ್ದರು.

ಐಟಿಬಿಟಿ ಶಿಕ್ಷಕರಾಗಿದ್ದಾರೆ-ಬೆಲವಂತ್ರಕAಠಿ
ಶಿರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರೆಲ್ಲ ಐಟಿಬಿಟಿ ಶಿಕ್ಷಕರಂತೆ ಇದ್ದಾರೆ. ಗ್ರಾಮಸ್ಥರೊಡನೆ ಸರ್ಕಾರದ ಯಾವುದೇ ಕಾರ್ಯಕ್ರಮಗಳಿದ್ದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ.ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಬರುವುದಿಲ್ಲ.ತಮಗೆ ತಿಳಿದಾಗ ಶಾಲೆಗೆ ಬಂದು ಬೇಗನೆ ಹೋಗುತ್ತಾರೆ.ಇದರಿಂದ ಶಿರೋಳ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಗ್ರಾಮದ ಯುವ ಮುಖಂಡ ರಮೇಶ ಬೆಲವಂತ್ರಕಂಠಿ ದೂರಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ