ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು

ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು



ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್‌ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.

ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.

ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ