Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು