Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ