Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ