Rain effect Water on road in Hungunda market

Rain Alert: ಮುಂದಿನ 48 ಗಂಟೆ ಭಾರೀ ಮಳೆ

Rain Alert: ಮುಂದಿನ 48 ಗಂಟೆ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ (Rain Alert) ಜೋರಾಗಿದೆ. ಈ ಮತ್ತೆ ವರುಣ ಅಬ್ಬರಿಸಲು ಸಜ್ಜಾಗಿದ್ದಾನೆ.

ಕಳೆದ ಕೆಲವು ದಿನಗಳಿಂದ ಹಿಂಗಾರು ಮಳೆಯ ಆರ್ಭಟ ಕಡಿಮೆ ಆಗುತ್ತಿತ್ತು. ಹೀಗಾಗಿ ಇನ್ನೇನು ಈ ವರ್ಷ ಮಳೆಗಾಲ ಮುಗಿದೇ ಹೋಯಿತು ಬಿಡು ಅಂತಾ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಳೆ ಮಾತ್ರ ಮತ್ತೆ ತನ್ನ ಆರ್ಭಟ ತೋರಿಸಲು ಶುರು ಮಾಡಲಿ ಎನ್ನುತ್ತಿದೆ ಹವಾಮಾನ ಇಲಾಖೆ ವರದಿ.

ಅದರಲ್ಲೂ ಮುಂದಿನ 48 ಗಂಟೆ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ(Rain Alert) ಸುರಿಯುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಹಿಂಗಾರು ಮಳೆ ಅಬ್ಬರಿಸುವುದಿಲ್ಲ. ಹೀಗಾಗಿ ನಮ್ಮ ಕನ್ನಡ ನಾಡಿಗೆ ಮುಂಗಾರು ಮಳೆಯೇ ಗಟ್ಟಿ. ಅಕಸ್ಮಾತ್ ಮುಂಗಾರು ಮಳೆ ಸುರಿಯದಿದ್ದರೆ ಬರ ಗ್ಯಾರಂಟಿ.

ಆ ವರ್ಷ ಕುಡಿಯುವ ನೀರಿಗೂ ಸಮಸ್ಯೆ ಪಕ್ಕಾ ಅಂತಾರೆ ಹವಾಮಾನ ತಜ್ಞರು. ಹೀಗಿದ್ದಾಗ ದಿಢೀರ್ ಅಂತಾ ಕರ್ನಾಟಕದಲ್ಲಿ ಭರ್ಜರಿಯಾಗಿ ಹಿಂಗಾರು ಮಳೆ ಕೂಡ ಅಬ್ಬರ ತೋರಿಸುತ್ತಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

48 ಗಂಟೆ ಕಾಲ ಭಾರಿ ಮಳೆ (Rain Alert)

ಈಗ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಕಾಣುತ್ತಿದ್ದು, ಮತ್ತೆ ಮಳೆ ಅಬ್ಬರ ಜೋರಾಗುವ ಮುನ್ಸೂಚನೆ ಸಿಗುತ್ತಿದೆ. ಇದೀಗ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ. ನಮ್ಮ ಬೆಂಗಳೂರಿನ ಕಥೆ ಏನು? ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರಲ್ಲಿ ಮಳೆ ಬೀಳುತ್ತಾ?

ಮುಂದಿನ 48 ಗಂಟೆ ಕಾಲ ದಕ್ಷಿಣ ಕರ್ನಾಟಕದ ರಾಜ್ಯಗಳು ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. ಹಾಗೇ ಕನ್ನಡಿಗರ ರಾಜಧಾನಿಗೂ ಮಳೆ ಕಂಟಕ ಇದ್ದು, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೂಡ ಮೋಡ ಕವಿದ ವಾತಾವರಣದ ಜೊತೆಗೆ ಮಳೆ ಸುರಿಯುವ ಮುನ್ಸೂಚನೆ ಇದೆ.

ಹೊರಗೆ ಹೋಗುವಾಗ ಎಚ್ಚರ..!

ಹಿಂಗಾರು ಮಳೆ ಜೋರಾಗಿ ಶುರುವಾಗಿ ಹಲವು ದಿನಗಳೇ ಕಳೆದಿದ್ದು, ಕರ್ನಾಟಕದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಧ್ಯ ಮಧ್ಯದಲ್ಲಿ ಹಿಂಗಾರು ಮಳೆ ಒಂದಷ್ಟು ಬ್ರೇಕ್ ಪಡೆದರೂ ಅದರ ಆರ್ಭಟಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಳೆದ 2 ವಾರಗಳಿಂದ ಮಳೆ ಅಬ್ಬರ ತೋರಿಸಿ ಭಯ ಮೂಡಿಸಿದೆ. ಇದೀಗ ಮುಂದಿನ ಕೆಲವು ದಿನಗಳ ಕಾಲ ಮತ್ತೆ ಭರ್ಜರಿ ಮಳೆ ಬೀಳುವ ಭಯ ಆವರಿಸಿದ್ದು, ಮಳೆ ಬೀಳುವ ಸಮಯದಲ್ಲಿ ಎಚ್ಚರಿಕೆ ವಹಿಸಬೇಕಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು